ಆಂಧ್ರದಲ್ಲಿ ಮೋದಿ ಬೆಂಬಲಿಸುವವರಿಗೆ ನಾಚಿಕೆಯಾಗಬೇಕು: CM ನಾಯ್ಡು
Team Udayavani, Jan 5, 2019, 6:03 AM IST
ಅಮರಾವತಿ : ಕಾಕಿನಾಡದಲ್ಲಿ ತನ್ನ ಬೆಂಗಾವಲು ವಾಹನ ಸಾಲನ್ನು ತಡೆದ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಿಡಿ ಕಾರಿದ್ದಾರೆ.
ನನ್ನ ವಿರುದ್ಧ ನೀವು ಹೀಗೆ ಮಾಡಿದರೆ ಜನರನ್ನು ನಿಮ್ಮನ್ನು ಬಿಡುವುದಿಲ್ಲ; ಮುಗಿಸಿ ಬಿಡುತ್ತಾರೆ, ಜಾಗ್ರತೆ; ಆಂಧ್ರ ಪ್ರದೇಶದಲ್ಲಿ ಮೋದಿಯನ್ನು ಬೆಂಬಲಿಸುವುದಕ್ಕೆ ನಿಮಗೆ ನಾಚಿಕೆಯಾಗಬೇಕು ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾರಣಕ್ಕೆ ಸಿಎಂ ನಾಯ್ಡು ಅವರು ಕಾಕಿನಾಡದಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದಾಗ ಅವರ ಬೆಂಗಾವಲು ವಾಹನ ಸಾಲನ್ನು ಬಿಜೆಪಿ ಕಾರ್ಯಕರ್ತರು ತಡೆದು ಪ್ರತಿಭಟಿಸಿದ್ದರು. ಪರಿಣಾಮವಾಗಿ ಪೊಲೀಸರು ಬಿಜೆಪಿ ಜಿಲ್ಲಾ ಅಧ್ಯಕ್ಷ ಮಲಕೊಂಡಯ್ಯ ಅವರನ್ನು ಬಂಧಿಸಿದ್ದರು.
2018ರ ಮಾರ್ಚ್ನಲ್ಲಿ ನಾಯ್ಡು ಅವರ ಟಿಡಿಪಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ್ದ ಎನ್ಡಿಎ ಕೂಟದಿಂದ ಹೊರಬಂದಿತ್ತು. ಅನಂತರ ಸಂಸತ್ತಿನಲ್ಲಿ ಟಿಡಿಪಿ ಅವಿಶ್ವಾಸ ಗೊತ್ತುವಳಿಯನ್ನು ಕೂಡ ಮಂಡಿಸಿತ್ತು.
ಈ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳ ಮಹಾ ಮೈತ್ರಿ ಕೂಟ ರಚನೆಗೆ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ