ರೋಗ ತಡೆಗೆ ಸಂಶೋಧನೆ
Team Udayavani, Jan 7, 2019, 12:30 AM IST
ಹೊಸದಿಲ್ಲಿ: ದೇಶದಲ್ಲೇ ಅತ್ಯಂತ ವಿಶಿಷ್ಟ ಯೋಜನೆಯನ್ನು ಕೇಂದ್ರ ಸರಕಾರ ಹಮ್ಮಿಕೊಂಡಿದ್ದು, 103ಕ್ಕೂ ಹೆಚ್ಚು ಬುಡಕಟ್ಟು ಜನಾಂಗಗಳಲ್ಲಿ ಕಾಣಿಸಿ ಕೊಳ್ಳುವ ಸಾಮಾನ್ಯ ರೋಗಗಳ ನಿವಾರಣೆ ಹಾಗೂ ತಡೆಗೆ ಸಂಶೋಧನೆ ನಡೆಸ ಲಾಗುತ್ತದೆ. ಇದನ್ನು “ಮೈಕ್ರೋಬ್ ಪ್ರಾಜೆಕ್ಟ್’ ಎಂದು ಕರೆಯಲಾಗಿದ್ದು, 150 ಕೋಟಿ ರೂ. ಮೀಸಲಿಡಲಾಗಿದೆ.
ಈ ಯೋಜನೆ ಅಡಿಯಲ್ಲಿ 103 ಬುಡಕಟ್ಟು ಜನಾಂಗಗಳ 20,600 ಜನರ ರಕ್ತ, ಚರ್ಮ ಹಾಗೂ ಜೊಲ್ಲು ಮಾದರಿಯನ್ನು ಸಂಗ್ರಹಿ ಸಲಾಗುತ್ತದೆ. ಈ ಬುಡಕಟ್ಟು ಜನರು ತಮ್ಮ ಸಂಬಂಧಿಗಳಲ್ಲೇ ವಿವಾಹವಾಗುವುದರಿಂದ ಕೆಲವು ರೋಗಗಳು ಆನುವಂಶೀಯವಾಗಿ ಹರಡುತ್ತಿದ್ದು, ಇವರಲ್ಲಿರುವ ಬ್ಯಾಕ್ಟೀರಿಯಾ, ಶಿಲೀಂಧ್ರ, ವೈರಸ್ ಮತ್ತು ಇತರ ಸೂಕ್ಷ್ಮ ಜೀವಿಗಳನ್ನು ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ.
ಬೆಂಗಳೂರಿನ ಸಂಸ್ಥೆ: ಬೆಂಗಳೂರಿನ ಟ್ರಾನ್ಸ್ ಡಿಸಿಪ್ಲಿನರಿ ಹೆಲ್ತ್ ಸೈನ್ಸಸ್ ಮತ್ತು ಟೆಕ್ನಾಲಜಿ ಇನ್ಸ್ಟಿಟ್ಯೂಟ್ ಹಾಗೂ ಇತರ 10 ಸಂಸ್ಥೆಗಳು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳಲಿವೆ. ಈ ಹಿಂದೆ ಬುಡಕಟ್ಟು ಅಥವಾ ಹಿಂದುಳಿದ ಜನರ ಮೇಲೆ ಮೈಕ್ರೋಬಯೋಮ್ ಅಧ್ಯಯನವನ್ನು ವಿಶ್ವದ ಇತರ ದೇಶಗಳಲ್ಲೂ ನಡೆಸಲಾಗಿದ್ದು, ಅದೇ ಮಾದರಿಯಲ್ಲಿ ಈ ಅಧ್ಯಯನ ನಡೆಸಲಾಗುತ್ತಿದೆ. ಅಮೆರಿಕ, ಇಂಗ್ಲೆಂಡ್ ಹಾಗೂ ಕೆನಡಾದಲ್ಲಿ ಯಶಸ್ವಿಯಾಗಿ ಈ ಅಧ್ಯಯನ ನಡೆಸಲಾ ಗಿದ್ದು, ಇದು ಜನರ ಮೈಕ್ರೋಬ್ಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸುವಲ್ಲಿ ಮಹತ್ವದ ದಾಖಲೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ