ನಾಯಿಗೆ ಕಲ್ಲಿಂದ ಹೊಡೆದ ಯುವಕನನ್ನು ಗುಂಡಿಟ್ಟು ಕೊಂದ ಮಾಲೀಕ!
Team Udayavani, Jan 7, 2019, 4:52 AM IST
ನವದೆಹಲಿ:ತನ್ನ ಪ್ರೀತಿಯ ನಾಯಿಗೆ ಕಲ್ಲಿನಿಂದ ಹೊಡೆದ ಎಂಬ ಆಕ್ರೋಶಕ್ಕೆ 30 ವರ್ಷದ ಯುವಕನನ್ನು ಗುಂಡು ಹೊಡೆದು ಸಾಯಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಪೊಲೀಸ್ ಅಧಿಕಾರಿ ಅತುಲ್ ಠಾಕೂರ್ ಹೇಳಿಕೆ ಪ್ರಕಾರ,ಅಶ್ಪಾಕ್(30ವರ್ಷ) ಎಂಬ ಯುವಕ ದೆಹಲಿಯ ಈಶಾನ್ಯ ಪ್ರದೇಶದ ವೆಲ್ ಕಂ ಕಾಲೋನಿಯ ರಸ್ತೆಯಲ್ಲಿ ನಡೆದು ಬರುತ್ತಿದ್ದಾಗ ನಾಯಿ ಬೊಗಳಲು ಆರಂಭಿಸಿತ್ತು. ಅಷ್ಟೇ ಅಲ್ಲ ಅಶ್ಫಾಕ್ ನಿಗೆ ಕಚ್ಚಲು ಯತ್ನಿಸಿತ್ತು, ಈ ವೇಳೆ ಆತ ಕಲ್ಲಿನಿಂದ ಹೊಡೆದು ನಾಯಿಯನ್ನು ಓಡಿಸಿದ್ದ.
ತನ್ನ ಪ್ರೀತಿಯ ನಾಯಿಗೆ ಕಲ್ಲಿನಿಂದ ಹೊಡೆದಿರುವುದನ್ನು ಗಮನಿಸಿದ ಮಾಲೀಕ ಮೆಹತಾಬ್, ಮನೆಯೊಳಗೆ ಹೋಗಿ ಪಿಸ್ತೂಲ್ ಅನ್ನು ತೆಗೆದುಕೊಂಡು ಬಂದು, ಅಶ್ಫಾಕ್ ಬಳಿ ನಾಯಿಗೆ ಕಲ್ಲು ಹೊಡೆದಿದ್ದೇಕೆ ಎಂದು ಕ್ಯಾತೆ ತೆಗೆದು ಜಗಳಕ್ಕಿಳಿದುಬಿಟ್ಟಿದ್ದ. ಈ ವೇಳೆ ಆತನಿಗೆ ಗುಂಡು ಹೊಡೆದು ಬಿಟ್ಟಿದ್ದ ಎಂದು ಠಾಕೂರ್ ವಿವರಿಸಿದ್ದಾರೆ.
ಕೂಡಲೇ ಕುಸಿದುಬಿದ್ದ ಅಶ್ಫಾಕ್ ನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಅಶ್ಫಾಕ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ