34 ವರ್ಷಗಳ ಕಾಲ ಬಂದ್ ಮಾಡಿ ರಾಜ್ಯ ನಾಶ ಮಾಡಿದ್ದು ಸಾಕು; ಮಮತಾ
Team Udayavani, Jan 8, 2019, 9:01 AM IST
ಕೋಲ್ಕತಾ:ಸುಮಾರು ಹತ್ತು ಕಾರ್ಮಿಕ ಸಂಘಟನೆಗಳು ಸೇರಿ ಕರೆ ನೀಡಿರುವ ಭಾರತ್ ಬಂದ್ ರಾಜ್ಯದ ಮೇಲೆ ಯಾವ ಪರಿಣಾಮವೂ ಬೀರಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕೇಂದ್ರದ ಜನ ವಿರೋಧಿ ನೀತಿಯ ವಿರುದ್ಧ ಕಾರ್ಮಿಕ ಸಂಘಟನೆಗಳು ಮಂಗಳವಾರ ಮತ್ತು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದವು. ಆದರೆ ಪಶ್ಚಿಮ ಬಂಗಾಳದಲ್ಲಿ ಯಾವುದೇ ಬಂದ್ ಅನ್ನು ಬೆಂಬಲಿಸದಿರುವಂತೆ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಸಾಕಪ್ಪ, ಸಾಕು..ಕಳೆದ 34 ವರ್ಷಗಳಲ್ಲಿ ಅವರು(ಎಡಪಕ್ಷಗಳು) ಬಂದ್ ಹೆಸರಿನಲ್ಲಿ ರಾಜ್ಯವನ್ನು ನಾಶಮಾಡಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದಲ್ಲಿ ಬಂದ್ ಗೆ ಅವಕಾಶವೇ ಇಲ್ಲ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು.
ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಸರ್ಕಾರಿ ಅಧಿಕಾರಿಗಳು ರಜೆ ತೆಗೆದುಕೊಳ್ಳಬಾರದು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಅಷ್ಟೇ ಅಲ್ಲ ಹೆಚ್ಚುವರಿಯಾಗಿ 500 ಬಸ್ ಗಳು ಓಡಾಡಲಿವೆ ಎಂದು ಸೋಮವಾರ ತಿಳಿಸಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುವುದಾಗಿ ಬ್ಯಾನರ್ಜಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ