ಶೇ.10ರ ಮೀಸಲಾತಿಗೆ ಪ್ರಧಾನಿ ಮೋದಿ ಸಮರ್ಥನೆ, ಕಾಂಗ್ರೆಸ್ಗೆ ತರಾಟೆ
Team Udayavani, Jan 9, 2019, 11:47 AM IST
ಸೋಲಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಾಮಾನ್ಯ ಕೆಟಗರಿಯಲ್ಲಿ ಶೇ.10ರ ಮೀಸಲಾತಿಯನ್ನು ನೀಡುವ ತಮ್ಮ ಸರಕಾರದ ಮಸೂದೆಯನ್ನು ಸಮರ್ಥಿಸಿಕೊಂಡರಲ್ಲದೆ ಲೋಕಸಭೆಯಲ್ಲಿ ಈ ಮಸೂದೆ ಪಾಸಾಗುವ ಮೂಲಕ ಸುಳ್ಳು ಹರಡುವವರಿಗೆ ಸರಿಯಾದ ಉತ್ತರ ನೀಡಿದಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ತೀವ್ರ ವಾಕ್ ದಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷ ರಫೇಲ್ ಫೈಟರ್ ಜೆಟ್ ಖರೀದಿ ವಿರುದ್ಧದ ಆರೋಪಗಳ ಮೂಲಕ ಏನನ್ನು ಸಾಧಿಸಲು ಮತ್ತು ಸಾಬೀತುಪಡಿಸಲು ಹೊರಟಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿದರು.
ಆರ್ಥಿಕ ದುರ್ಬಲರಿಗೆ ಶೇ.10ರ ಉದ್ಯೋಗ ಮತ್ತು ಮೀಸಲಾತಿ ಕಲ್ಪಿಸುವ ಮಸೂದೆ ರಾಜ್ಯಸಭೆಯಲ್ಲೂ ಪಾಸಾಗುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಈ ಮಸೂದೆಯಿಂದ ದಲಿತರು, ಬುಡಕಟ್ಟು ಜನರು ಮತ್ತು ಅವಕಾಶ ವಂಚಿತರಿಗೆ ಯಾವ ರೀತಿಯ ಬಾಧೆಯೂ ಉಂಟಾಗುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.
ಲೋಕಸಭೆಯಲ್ಲಿ ಮೀಸಲಾತಿ ಮಸೂದೆ ಪಾಸಾಗಿರುವುದು ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ವರ್ಣಿಸಿದ ಪ್ರಧಾನಿ ಮೋದಿ, ಅವಕಾಶ ವಂಚಿತ ಆರ್ಥಿಕ ದುರ್ಬಲರ ಕಲ್ಯಾಣ ಸಾಧಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಹೇಳಿದರು.
ಲೋಕಸಭೆಯಲ್ಲಿ ಪಾಸಾಗಿರುವ ಪೌರತ್ವ ಮಸೂದೆಯು ನೆರೆಯ ಬಾಂಗ್ಲಾ, ಪಾಕಿಸ್ಥಾನ, ಅಪಾ^ನಿಸ್ಥಾನದಿಂದ ಧಾರ್ಮಿಕ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬರುವ ಮುಸ್ಲಿಮೇತರರಿಗೆ ದೇಶದ ಪೌರತ್ವ ನೀಡುವ ಉದ್ದೇಶ ಹೊಂದಿದೆ; ಇದರಿಂದ ಈಶಾನ್ಯ ರಾಜ್ಯದ ಜನರು ಎಷ್ಟು ಮಾತ್ರಕ್ಕೂ ಮೊಟಕಾಗುವುದಿಲ್ಲ ಎಂಬ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ