ತ್ರಿವಳಿ ತಲಾಖ್: ಮತ್ತೆ ಅಧ್ಯಾದೇಶ
Team Udayavani, Jan 11, 2019, 12:30 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವದ ತ್ರಿವಳಿ ತಲಾಖ್ಗೆ ಮತ್ತೆ ಅಧ್ಯಾದೇಶ ತರಲಾಗಿದೆ. ಗುರುವಾರ ರಾತ್ರಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಅಧ್ಯಾದೇಶ ತರಲು ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರವಷ್ಟೇ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆ ಒಪ್ಪಿಗೆ ಪಡೆಯುವಲ್ಲಿ ಕೇಂದ್ರ ಸರಕಾರ ವಿಫಲವಾಗಿತ್ತು. ಹೀಗಾಗಿ ಕಳೆದ ಸೆಪ್ಟಂಬರ್ನಲ್ಲಿ ಹೊರಡಿಸಲಾಗಿದ್ದ ಅಧ್ಯಾದೇಶ ಅವಧಿ ಜ.22ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈಗಲೇ ತ್ರಿವಳಿ ತಲಾಖ್ ಸಂಬಂಧ ಮತ್ತೆ ಅಧ್ಯಾದೇಶ ಹೊರಡಿಸಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಈ ಸಂಬಂಧ ರಾಜ್ಯಸಭೆಯಲ್ಲಿ ಪುನರ್ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.