ಆಲೋಕ್‌ ವರ್ಮಾ ವಜಾ: ಹುದ್ದೆ ಕಳೆದುಕೊಂಡ ಮೊದಲ ನಿರ್ದೇಶಕ


Team Udayavani, Jan 11, 2019, 12:30 AM IST

q-403.jpg

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿ ಸಿಬಿಐ ನಿರ್ದೇಶಕ ಹುದ್ದೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದ ಆಲೋಕ್‌ ವರ್ಮಾ ಅವರು ಎರಡೇ ದಿನಗಳಲ್ಲಿ ಹುದ್ದೆ ಕಳೆದು ಕೊಂಡಿದ್ದಾರೆ. ಸಿಬಿಐ ಸಂಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶಕರೊಬ್ಬರು ಈ ರೀತಿಯ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಆಲೋಕ್‌ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ತೆರವು ಮಾಡಿದೆ. ಈ ಜಾಗಕ್ಕೆ ಮಧ್ಯಾಂತರ ಸಿಬಿಐ ನಿರ್ದೇಶಕರಾಗಿದ್ದ ಎಂ. ನಾಗೇಶ್ವರ ರಾವ್‌ ಅವರನ್ನು ಮುಂದುವರಿಸಲಾಗಿದೆ. ಖಾಯಂ ನಿರ್ದೇಶಕರ ಆಯ್ಕೆಯವರೆಗೂ ಇವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ. 

ಬುಧವಾರ ರಾತ್ರಿ ಸಭೆ ಸೇರಿದ್ದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂ ಕೋರ್ಟ್‌
ನ್ಯಾ| ಎ.ಕೆ. ಸಿಕ್ರಿ ಅವರಿದ್ದ ಉನ್ನತ ಸಮಿತಿ ಯಾವುದೇ ನಿರ್ಧಾರಕ್ಕೆ ಬಂದಿರಲಿಲ್ಲ. ಮತ್ತೆ ಗುರುವಾರ ಸಂಜೆಯೂ ಸಭೆ ಸೇರಿ ಸಿಬಿಐ ವರದಿಯಲ್ಲಿನ ಅಂಶಗಳ ಬಗ್ಗೆ ಚರ್ಚಿಸಿತು. ಕಡೆಗೆ 2:1ರ ಬಹುಮತದ ಆಧಾರದ ಮೇಲೆ ವಜಾ ನಿರ್ಧಾರ ತೆಗೆದುಕೊಂಡಿದೆ. ಮೋದಿ ಮತ್ತು ನ್ಯಾ| ಎ.ಕೆ.ಸಿಕ್ರಿ ಅವರು ಸಿವಿಸಿ ವರದಿಯ ಆಧಾರದ ಮೇಲೆ ಆಲೋಕ್‌ ವರ್ಮಾ ಅವರನ್ನು ವಜಾ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದರೆ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರವಾಗಿ ವಿರೋಧಿಸಿದರು. ಸಮಿತಿ ಮುಂದೆ ವಾದ ಮಂಡನೆಗೆ ಆಲೋಕ್‌ ವರ್ಮಾಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದರು. ಕಡೆಗೆ 2:1ರ ಬಹುಮತದ ಆಧಾರದ ಮೇಲೆ ಆಲೋಕ್‌ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ತೆರವು ಮಾಡಿ, ಅಗ್ನಿಶಾಮಕ ದಳ, ನಾಗರಿಕ ರಕ್ಷಣೆ ಮತ್ತು ಹೋಮ್‌ ಗಾರ್ಡ್‌ ಸೇವೆಯ ಮಹಾ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. 

ಎಂಟು ಅಂಶಗಳ ಆರೋಪ
ಆಲೋಕ್‌ ವರ್ಮಾ ವಿರುದ್ಧ ಸಿವಿಸಿ ಎಂಟು ಅಂಶಗಳ ಆರೋಪಗಳನ್ನು ಪಟ್ಟಿ ಮಾಡಿದೆ. ಇದರಲ್ಲಿ ಭ್ರಷ್ಟ ಅಧಿಕಾರಿಗಳನ್ನು ಸೇರಿಸಿಕೊಂಡಿದ್ದು, ಮೋಯಿನ್‌ ಖುರೇಶಿ ಪ್ರಕರಣದ ತನಿಖೆಯಲ್ಲಿ ಹೊಂದಾಣಿಕೆ ಮಾಡಿದ್ದು, ಐಆರ್‌ಸಿಟಿಸಿ ಹಗರಣಗಳು ಸೇರಿವೆ. 

ವರ್ಮಾ ಪರ ಖರ್ಗೆ ವಾದ
ಗುರುವಾರ ಸಂಜೆ 4.30ಕ್ಕೆ ಆರಂಭವಾದ ಸಭೆ ಎರಡು ಗಂಟೆಗಳ ಕಾಲ ನಡೆದಿದೆ. ಇಡೀ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಲೋಕ್‌ ವರ್ಮಾ ಪರ ವಾದಿಸಿದ್ದಾರೆ. ವರ್ಮಾ ವಿರುದ್ಧ ಸಿವಿಸಿ ಮಾಡಿರುವ ಆರೋಪಗಳ ಕುರಿತಂತೆ ಉನ್ನತಾಧಿಕಾರ ಸಮಿತಿ ಮುಂದೆ ವಾದ ಮಂಡನೆಗೆ ಅವಕಾಶ ಮಾಡಿಕೊಡಬೇಕು ಎಂಬುದು ಖರ್ಗೆ ಅವರ ವಾದವಾಗಿತ್ತು.

ಇಂದು ಅಸ್ಥಾನ ತೀರ್ಪು
ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಅಸ್ಥಾನ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಂತೆ ಶುಕ್ರವಾರ ದಿಲ್ಲಿ ಹೈಕೋರ್ಟ್‌ ತೀರ್ಪು ನೀಡಲಿದೆ. ಲಂಚ ಆರೋಪದ ಸಂಬಂಧ ಅಸ್ಥಾನ, ಅಧಿಕಾರಿಗಳಾದ ದೇವೇಂದರ್‌ ಕುಮಾರ್‌, ಆಲೋಕ್‌ ಕುಮಾರ್‌ ವರ್ಮಾ, ಎ.ಕೆ. ಶರ್ಮಾ ವಿರುದ್ಧ ಎಫ್ಐಆರ್‌ ರದ್ದು ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಈಗಾಗಲೇ ವಿಚಾರಣೆ ಮುಗಿಸಿರುವ ದಿಲ್ಲಿ ಹೈಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಲಿದೆ.

ಸಿವಿಸಿ ವರದಿಯಲ್ಲಿ  ಏನಿದೆ?
ಮಾಂಸ ರಫ್ತುದಾರ ಮೋಯಿನ್‌ ಖುರೇಶಿ ಕೇಸಿನಲ್ಲಿ  ತನಿಖೆಗೆ ಅವಕಾಶ ನೀಡದೆ ತಡೆ.
ಗುರ್ಗಾಂವ್‌ನಲ್ಲಿನ ಭೂಮಿ ಖರೀದಿ. ಈ ಪ್ರಕರಣದಲ್ಲಿ  36 ಕೋಟಿ ರೂ. ವರ್ಗಾವಣೆಯಾಗಿರುವ ಶಂಕೆ.
ಲಾಲು ಪ್ರಸಾದ್‌ ಯಾದವ್‌ ಭಾಗಿ ಯಾಗಿರುವ ಐಆರ್‌ಸಿಟಿಸಿ ಹಗರಣದಲ್ಲಿ ಅಧಿಕಾರಿಯೊಬ್ಬರ ರಕ್ಷಣೆಗೆ ವರ್ಮಾ ಯತ್ನ.
ಸಿಬಿಐಯಲ್ಲಿ  ಭ್ರಷ್ಟ  ಅಧಿಕಾರಿಗಳನ್ನು ಇರಿಸಿಕೊಂಡು ಸಿವಿಸಿಗೆ ದಾಖಲೆ ನೀಡುವಲ್ಲಿ  ವಿಳಂಬ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.