ಆಲೋಕ್‌ ವರ್ಮಾ ವಜಾ: ಹುದ್ದೆ ಕಳೆದುಕೊಂಡ ಮೊದಲ ನಿರ್ದೇಶಕ


Team Udayavani, Jan 11, 2019, 12:30 AM IST

q-403.jpg

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿ ಸಿಬಿಐ ನಿರ್ದೇಶಕ ಹುದ್ದೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದ ಆಲೋಕ್‌ ವರ್ಮಾ ಅವರು ಎರಡೇ ದಿನಗಳಲ್ಲಿ ಹುದ್ದೆ ಕಳೆದು ಕೊಂಡಿದ್ದಾರೆ. ಸಿಬಿಐ ಸಂಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶಕರೊಬ್ಬರು ಈ ರೀತಿಯ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಆಲೋಕ್‌ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ತೆರವು ಮಾಡಿದೆ. ಈ ಜಾಗಕ್ಕೆ ಮಧ್ಯಾಂತರ ಸಿಬಿಐ ನಿರ್ದೇಶಕರಾಗಿದ್ದ ಎಂ. ನಾಗೇಶ್ವರ ರಾವ್‌ ಅವರನ್ನು ಮುಂದುವರಿಸಲಾಗಿದೆ. ಖಾಯಂ ನಿರ್ದೇಶಕರ ಆಯ್ಕೆಯವರೆಗೂ ಇವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ. 

ಬುಧವಾರ ರಾತ್ರಿ ಸಭೆ ಸೇರಿದ್ದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂ ಕೋರ್ಟ್‌
ನ್ಯಾ| ಎ.ಕೆ. ಸಿಕ್ರಿ ಅವರಿದ್ದ ಉನ್ನತ ಸಮಿತಿ ಯಾವುದೇ ನಿರ್ಧಾರಕ್ಕೆ ಬಂದಿರಲಿಲ್ಲ. ಮತ್ತೆ ಗುರುವಾರ ಸಂಜೆಯೂ ಸಭೆ ಸೇರಿ ಸಿಬಿಐ ವರದಿಯಲ್ಲಿನ ಅಂಶಗಳ ಬಗ್ಗೆ ಚರ್ಚಿಸಿತು. ಕಡೆಗೆ 2:1ರ ಬಹುಮತದ ಆಧಾರದ ಮೇಲೆ ವಜಾ ನಿರ್ಧಾರ ತೆಗೆದುಕೊಂಡಿದೆ. ಮೋದಿ ಮತ್ತು ನ್ಯಾ| ಎ.ಕೆ.ಸಿಕ್ರಿ ಅವರು ಸಿವಿಸಿ ವರದಿಯ ಆಧಾರದ ಮೇಲೆ ಆಲೋಕ್‌ ವರ್ಮಾ ಅವರನ್ನು ವಜಾ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದರೆ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರವಾಗಿ ವಿರೋಧಿಸಿದರು. ಸಮಿತಿ ಮುಂದೆ ವಾದ ಮಂಡನೆಗೆ ಆಲೋಕ್‌ ವರ್ಮಾಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದರು. ಕಡೆಗೆ 2:1ರ ಬಹುಮತದ ಆಧಾರದ ಮೇಲೆ ಆಲೋಕ್‌ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ತೆರವು ಮಾಡಿ, ಅಗ್ನಿಶಾಮಕ ದಳ, ನಾಗರಿಕ ರಕ್ಷಣೆ ಮತ್ತು ಹೋಮ್‌ ಗಾರ್ಡ್‌ ಸೇವೆಯ ಮಹಾ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. 

ಎಂಟು ಅಂಶಗಳ ಆರೋಪ
ಆಲೋಕ್‌ ವರ್ಮಾ ವಿರುದ್ಧ ಸಿವಿಸಿ ಎಂಟು ಅಂಶಗಳ ಆರೋಪಗಳನ್ನು ಪಟ್ಟಿ ಮಾಡಿದೆ. ಇದರಲ್ಲಿ ಭ್ರಷ್ಟ ಅಧಿಕಾರಿಗಳನ್ನು ಸೇರಿಸಿಕೊಂಡಿದ್ದು, ಮೋಯಿನ್‌ ಖುರೇಶಿ ಪ್ರಕರಣದ ತನಿಖೆಯಲ್ಲಿ ಹೊಂದಾಣಿಕೆ ಮಾಡಿದ್ದು, ಐಆರ್‌ಸಿಟಿಸಿ ಹಗರಣಗಳು ಸೇರಿವೆ. 

ವರ್ಮಾ ಪರ ಖರ್ಗೆ ವಾದ
ಗುರುವಾರ ಸಂಜೆ 4.30ಕ್ಕೆ ಆರಂಭವಾದ ಸಭೆ ಎರಡು ಗಂಟೆಗಳ ಕಾಲ ನಡೆದಿದೆ. ಇಡೀ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಲೋಕ್‌ ವರ್ಮಾ ಪರ ವಾದಿಸಿದ್ದಾರೆ. ವರ್ಮಾ ವಿರುದ್ಧ ಸಿವಿಸಿ ಮಾಡಿರುವ ಆರೋಪಗಳ ಕುರಿತಂತೆ ಉನ್ನತಾಧಿಕಾರ ಸಮಿತಿ ಮುಂದೆ ವಾದ ಮಂಡನೆಗೆ ಅವಕಾಶ ಮಾಡಿಕೊಡಬೇಕು ಎಂಬುದು ಖರ್ಗೆ ಅವರ ವಾದವಾಗಿತ್ತು.

ಇಂದು ಅಸ್ಥಾನ ತೀರ್ಪು
ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಅಸ್ಥಾನ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಂತೆ ಶುಕ್ರವಾರ ದಿಲ್ಲಿ ಹೈಕೋರ್ಟ್‌ ತೀರ್ಪು ನೀಡಲಿದೆ. ಲಂಚ ಆರೋಪದ ಸಂಬಂಧ ಅಸ್ಥಾನ, ಅಧಿಕಾರಿಗಳಾದ ದೇವೇಂದರ್‌ ಕುಮಾರ್‌, ಆಲೋಕ್‌ ಕುಮಾರ್‌ ವರ್ಮಾ, ಎ.ಕೆ. ಶರ್ಮಾ ವಿರುದ್ಧ ಎಫ್ಐಆರ್‌ ರದ್ದು ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಈಗಾಗಲೇ ವಿಚಾರಣೆ ಮುಗಿಸಿರುವ ದಿಲ್ಲಿ ಹೈಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಲಿದೆ.

ಸಿವಿಸಿ ವರದಿಯಲ್ಲಿ  ಏನಿದೆ?
ಮಾಂಸ ರಫ್ತುದಾರ ಮೋಯಿನ್‌ ಖುರೇಶಿ ಕೇಸಿನಲ್ಲಿ  ತನಿಖೆಗೆ ಅವಕಾಶ ನೀಡದೆ ತಡೆ.
ಗುರ್ಗಾಂವ್‌ನಲ್ಲಿನ ಭೂಮಿ ಖರೀದಿ. ಈ ಪ್ರಕರಣದಲ್ಲಿ  36 ಕೋಟಿ ರೂ. ವರ್ಗಾವಣೆಯಾಗಿರುವ ಶಂಕೆ.
ಲಾಲು ಪ್ರಸಾದ್‌ ಯಾದವ್‌ ಭಾಗಿ ಯಾಗಿರುವ ಐಆರ್‌ಸಿಟಿಸಿ ಹಗರಣದಲ್ಲಿ ಅಧಿಕಾರಿಯೊಬ್ಬರ ರಕ್ಷಣೆಗೆ ವರ್ಮಾ ಯತ್ನ.
ಸಿಬಿಐಯಲ್ಲಿ  ಭ್ರಷ್ಟ  ಅಧಿಕಾರಿಗಳನ್ನು ಇರಿಸಿಕೊಂಡು ಸಿವಿಸಿಗೆ ದಾಖಲೆ ನೀಡುವಲ್ಲಿ  ವಿಳಂಬ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.