ಕಾಶ್ಮೀರದಲ್ಲಿ ಭಾರೀ ಹಿಮಪಾತ : ಜಮ್ಮು -ಶ್ರೀನಗರ ಹೆದ್ದಾರಿ ಬಂದ್
Team Udayavani, Jan 11, 2019, 5:43 AM IST
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗಿದ್ದು ಜನಜೀವನಕ್ಕೆ ತೀವ್ರ ಬಾಧಿತವಾಗಿದೆ. ಶುಕ್ರವಾರ ಶ್ರೀನಗರದಲ್ಲಿ – 1.0 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಪಹಲ್ಗಾಮ್ನಲ್ಲಿ – 3.0 ಮತ್ತು ಗುಲ್ಮಾರ್ಗ್ನಲ್ಲಿ ಕನಿಷ್ಠ – 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಹಿಮ ವಿಪರೀತ ಪ್ರಮಾಣದಲ್ಲಿ ಸುರಿಯುತ್ತಿರುವ ಕಾರಣ ಜಮ್ಮು ಮತ್ತು ಶ್ರೀಗರ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜವಹಾರ್ ಸುರಂಗದಲ್ಲಿ ಸಂಚಾರ ಅಸಾಧ್ಯವಾಗಿದೆ ಎಂದು ವರದಿಯಾಗಿದೆ.
ಗುರುವಾರ ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಶ್ರೀನಗರದಿಂದ ಜಮ್ಮು ಕಡೆಗೆ ವಾಹನಗಳು ಸಂಚರಿಸಿದ್ದವು.
ಮುಂದಿನ 72 ಗಂಟೆಗಳ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ದ್ರಾಸ್ ಪ್ರದೇಶದಲ್ಲಿ – 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ನಗರದಲ್ಲಿ 8.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕತ್ರಾದಲ್ಲಿ 7.8, ಬಟೊಟೆಯಲ್ಲಿ 1.5, ಬನ್ನಿಹಾಲ್ನಲ್ಲಿ 2.1 ಮತ್ತು ಬದೆರ್ವಾಹದಲ್ಲಿ 0.4 ತಾಪಮಾನ ದಾಖಲಾಗಿದೆ.
ಜನವರಿ 31 ರ ವರೆಗೆ ಕಾಶ್ಮೀರದಲ್ಲಿ ಕಠಿಣ ದಿನಗಳು ಎದುರಾಗಿದ್ದು ಆ ಬಳಿಕ ಹಿಮಪಾತ ಕಡಿಮೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!