ಆಲೋಕ್ ವರ್ಮಾಗಿಂತ ರಾಹುಲ್ ಹೆಚ್ಚು ಅಳುತ್ತಿದ್ದಾರೆ : ಬಿಜೆಪಿ ಲೇವಡಿ
Team Udayavani, Jan 11, 2019, 6:05 AM IST
ಹೊಸದಿಲ್ಲಿ : ಸಿಬಿಐ ನಿರ್ದೇಶಕರ ಹುದ್ದೆಯಿಂದ ಉಚ್ಚಾಟಿತರಾಗಿರುವ ಮೊದಲ ವ್ಯಕ್ತಿ ಎನಿಸಿಕೊಂಡಿರುವ ಆಲೋಕ್ ವರ್ಮಾ ಅವರಿಗಿಂತಲೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ವರ್ಮಾ ದುರ್ದೆಶೆಗಾಗಿ ಹೆಚ್ಚು ಕಣ್ಣೀರನ್ನು ಸುರಿಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಇಂದು ಶುಕ್ರವಾರ ಮಾತನಾಡುತ್ತಿದ್ದ ಬಿಜೆಪಿ ನಾಯಕ ಜಿವಿಎಲ್ ನರಸಿಂಹ ರಾವ್ ಅವರು “ವರ್ಮಾ ದುರ್ದೆಶೆಗಾಗಿ ರಾಹುಲ್ ಗಾಂಧಿ ವರ್ಮಾಗಿಂತಲೂ ಹೆಚ್ಚು ಅಳುತ್ತಿದ್ದಾರೆ’ ಎಂದು ವ್ಯಂಗ್ಯದಿಂದ ಹೇಳಿದರು.
ಹಿಂದಿನ ಯುಪಿಎ ಸರಕಾರದ ಕಾಲದಲ್ಲಿ ಕಾಂಗ್ರೆಸ್ ಸಿಬಿಐ ವ್ಯವಹಾರದಲ್ಲಿ ಪದೇಪದೇ ಹಸ್ತಕ್ಷೇಪ ನಡೆಸುತ್ತಿತ್ತು; ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಮತ್ತು ಇತರ ರಕ್ಷಣಾ ಪರಿಕರ ಖರೀದಿ ವ್ಯವಹಾರಗಳಲ್ಲಿ ಸಿಬಿಐ ಯಾವೆಲ್ಲ ಸತ್ಯಾಂಶಗಳನ್ನು ಕಲೆ ಹಾಕುತ್ತಿದೆ ಎಂಬುದನ್ನು ತಿಳಿಯಲು ಕಾಂಗ್ರೆಸ್ ಯತ್ನಿಸುತ್ತಿತ್ತು ಎಂದು ನರಸಿಂಹ ರಾವ್ ಹೇಳಿದರು.
ಕಾಂಗ್ರೆಸ್ಗೆ ಸಿಬಿಐ ಬಗ್ಗೆ ಅತೀವವಾದ ಭಯ ಇತ್ತು. ಸಿಬಿಐಗೆ ರಕ್ಷಣಾ ‘ಡೀಲ್’ (ಭ್ರಷ್ಟಾಚಾರ) ಗಳ ನಿಜಾಂಶಗಳು ದೊರಕುವವೋ ಎಂಬ ಬಗ್ಗೆ ಕಾಂಗ್ರೆಸ್ ಗೆ ಆತಂಕವಿತ್ತು. ಆದುದರಿಂದಲೇ ಅದು ಸಿಬಿಐ ಚರ್ಚೆಯಲ್ಲಿ ಪದೇ ಪದೇ ಹಸ್ತಕ್ಷೇಪ ನಡೆಸಿ ಸಿಬಿಐ ಯಾವೆಲ್ಲ ನಿಜಾಂಶಗಳನ್ನು ಕಲೆ ಹಾಕಿದೆ ಎಂಬುದನ್ನು ಕೆದಕಿ ನೋಡುತ್ತಿತ್ತು ಎಂದು ರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ