ಕಿಡ್ನಿ ಮಾರಲು ಗಡಿ ನುಸುಳಿ ಭಾರತ ಪ್ರವೇಶಿಸಿದ್ದ ಬಾಂಗ್ಲಾ ಯುವಕನ ಬಂಧನ


Team Udayavani, Jan 11, 2019, 9:18 AM IST

kidny.jpg

ನವದೆಹಲಿ:ತನ್ನ ಕಿಡ್ನಿ ಮಾರಾಟ ಮಾಡುವ ಉದ್ದೇಶದಿಂದ ಕಾನೂನು ಬಾಹಿರವಾಗಿ ಭಾರತದ ಗಡಿಯೊಳಗೆ ಪ್ರವೇಶಿಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸುಮಾರು ಎರಡು ತಿಂಗಳ ಹಿಂದೆ ಬಾಂಗ್ಲಾದ ಮೊಹಮ್ಮದ್ ಗೈನಿ ಮಿಯಾನ್(35) ಎಂಬ ಯುವಕ ಅಜ್ಮೀರ್ ಷರೀಫ್ ಗೆ ಬರುವ ಉದ್ದೇಶದಿಂದ ಅಕ್ರಮವಾಗಿ ಗಡಿ ಪ್ರವೇಶಿಸಿದ್ದ. ಈತ ತನ್ನ ಕಿಡ್ನಿಯನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಹಲವು ಬಾರಿ ಭಾರತ ಪ್ರವೇಶಿಸಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದೆ ಎಂದು ದರ್ಗಾ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ಕಿಡ್ನಿ ಮಾರಾಟ ಮಾಡುವ ನಿಟ್ಟಿನಲ್ಲಿ ಮಿಯಾನ್ ಭಾರತಕ್ಕೆ ಬರುತ್ತಿರುವುದು ಇದು ಮೂರನೇ ಬಾರಿಯಾಗಿದೆ ಎಂದು ತಿಳಿಸಿರುವುದಾಗಿ ದರ್ಗಾ ಪೊಲೀಸ್ ಠಾಣಾಧಿಕಾರಿ ಕೈಲಾಶ್ ಬಿಶ್ನೋಯಿ ವಿವರಿಸಿದ್ದಾರೆ.

ಈತ ಮೊತ್ತ ಮೊದಲ ಬಾರಿಗೆ 2008ರಲ್ಲಿ ಅಕ್ರಮವಾಗಿ ಭಾರತದ ಗಡಿ ಪ್ರವೇಶಿಸಿದ್ದ. ಬಳಿಕ ಚೆನ್ನೈನಲ್ಲಿ ಸುಮಾರು ನಾಲ್ಕು ತಿಂಗಳ ವಾಸಿಸಿದ್ದ. ಏತನ್ಮಧ್ಯೆ ಭಾಷೆಯ ಸಮಸ್ಯೆಯಿಂದಾಗಿ ಆತನಿಗೆ ಕಿಡ್ನಿ ಮಾರಾಟ ಮಾಡಲು ಸಾಧ್ಯವಾಗಿರಲಿಲ್ಲ ಎಂದು ತನಿಖೆ ವೇಳೆ ಬಾಯ್ಬಿಟ್ಟಿರುವುದಾಗಿ ತಿಳಿಸಿದ್ದಾರೆ.

ತದನಂತರ ನಾಲ್ಕು ವರ್ಷದ ಬಳಿಕ ಮಿಯಾನ್ ವೀಸಾ ಮೂಲಕ ಭಾರತಕ್ಕೆ ಆಗಮಿಸಿದ್ದ. ಮತ್ತೆ ಚೆನ್ನೈಗೆ ತೆರಳಿದ್ದ ಯುವಕ ಆಸ್ಪತ್ರೆಯೊಂದಕ್ಕೆ ತೆರಳಿ ಕಿಡ್ನಿ ಮಾರಾಟ ಮಾಡುವುದಾಗಿ ತಿಳಿಸಿದ್ದ. ಆದರೆ ಆಸ್ಪತ್ರೆಯ ವೈದ್ಯರು ಆಪರೇಶನ್ ಮಾಡಲು ನಿರಾಕರಿಸಿದ್ದರು. ಯಾಕೆಂದರೆ ಮಿಯಾನ್ ಡ್ರಗ್ ವ್ಯಸನಿಯಾಗಿದ್ದ, ಹೀಗಾಗಿ ಆತನ ದೈಹಿಕ ಸ್ಥಿತಿ ತುಂಬಾ ದುರ್ಬಲವಾಗಿದೆ ಎಂದು ಹೇಳಿರುವುದಾಗಿ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮಿಯಾನ್ ಭಾರತಕ್ಕೆ ಆಗಮಿಸುತ್ತಿರುವ ಉದ್ದೇಶದ ಬಗ್ಗೆ ಪೊಲೀಸರು ಈಗಾಗಲೇ ಕೇಂದ್ರ ತನಿಖಾದಳಕ್ಕೆ ಮಾಹಿತಿ ನೀಡಿರುವುದಾಗಿ ಹೇಳಿದರು. ಭಾರತದಲ್ಲಿ ಅಕ್ರಮವಾಗಿ ಅಂಗಾಂಗ ಟ್ರಾನ್ಸ್ ಪ್ಲ್ಯಾಂಟ್ ಮಾಡುವ ದಂಧೆ ನಡೆಯುತ್ತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆಯೂ ತನಿಖಾ ದಳಕ್ಕೆ ವಿವರ ನೀಡಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಇದೀಗ ಸುಮಾರು ಎರಡು ತಿಂಗಳ ಹಿಂದೆ ಮಿಯಾನ್ ಮತ್ತೆ ಅಕ್ರಮವಾಗಿ ಗಡಿದಾಟಿ ಪಶ್ಚಿಮಬಂಗಾಳದ ಬೋನ್ಗಾವ್ ಎಂಬ ಹಳ್ಳಿಯನ್ನು ಪ್ರವೇಶಿಸಿದ್ದ. ಅಲ್ಲಿಂದ ಆತ ಕೋಲ್ಕೊತಾಗೆ ಬಂದಿದ್ದ. ಅಲ್ಲಿಂದ ರೈಲಿನಲ್ಲಿ ಅಜ್ಮೀರ್ ಗೆ ಆಗಮಿಸಿದ್ದ. ಅಲ್ಲಿ ಆರೋಪಿ ಮಿಯಾನ್ ದರ್ಗಾಕ್ಕೆ ಭೇಟಿ ನೀಡಿದ ನಂತರ ಕಿಡ್ನಿ ಮಾರಾಟ ಮಾಡಲು ಪ್ರಯತ್ನಿಸಿ ವಿಫಲವಾಗಿದ್ದ. ಅಜ್ಮೀರ್ ನಲ್ಲಿ ಮೊಬೈಲ್ ಫೋನ್ ಮಾರಾಟ ಮಾಡಿ ಹುಸೈನ್ ಎಂಬಾತನನ್ನು ಸಂಪರ್ಕಿಸಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದ. ಹೀಗೆ ಹುಸೈನ್ ತಿಂಗಳಿಗೆ ಮೂರು ಸಾವಿರ ರೂಪಾಯಿಗೆ ಬಾಡಿಗೆ ಮನೆ ಮಾಡಿಕೊಟ್ಟಿರುವುದಾಗಿ ಮಿಯಾನ್ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ. ಕಳೆದ ಭಾನುವಾರ ಪೊಲೀಸರು ಹುಸೈನ್ ಮನೆ ಮೇಲೆ ದಾಳಿ ನಡೆಸಿದಾಗ ಮಿಯಾನ್ ನನ್ನು ಬಂಧಿಸಿದ್ದರು. ಅಷ್ಟೇ ಅಲ್ಲ ಪಾಸ್ ಪೋರ್ಟ್, ಬಾಂಗ್ಲಾದೇಶದ ನಾಲ್ಕು ಸಿಮ್, ಒಂದು ಪಾಕಿಸ್ತಾನದ ಸಿಮ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಿಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.