ಸ್ವಂತ ಮಕ್ಕಳಿಬ್ಬರನ್ನು ಹೊಡೆದು ಕೊಂದ ಕುಡುಕ ಅಪ್ಪ ಅರೆಸ್ಟ್
Team Udayavani, Jan 11, 2019, 10:59 AM IST
ಜೈಪುರ : ದಿನಪೂರ್ತಿ ಕುಡಿದುಕೊಂಡೇ ಇರುವ 30ರ ಹರೆಯದ ರಮೇಶ್ ವಧೇರಾ ಎಂಬ ವ್ಯಕ್ತಿ ನಿನ್ನೆ ಗುರುವಾರ ತನ್ನ ಐದು ವರ್ಷದ ಮಗಳು ಕುಷ್ಬಾ ಮತ್ತು ಮೂರು ವರ್ಷದ ಮಗ ರಾಜು ವನ್ನು ಕುಡಿದ ಅಮಲಿನಲ್ಲಿ ಹೊಡೆದು ಸಾಯಿಸಿದ ಅಮಾನುಷ ಘಟನೆ ವರದಿಯಾಗಿದೆ.
ಮಕ್ಕಳನ್ನು ಹೊಡೆದು ಕೊಂದ ವೇಳೆ ವಧೇರಾನ ಪತ್ನಿ ಮನೆಯಲ್ಲಿರಲಿಲ್ಲ; ಆಕೆ ತನ್ನ ತವರಿಗೆ ಹೋಗಿದ್ದಳು. ಮಕ್ಕಳು ತಮ್ಮ ಚಿಕ್ಕಪ್ಪನ ಮನೆಯಲ್ಲಿದ್ದರು.
ವಧೇರ ತನ್ನ ಮಕ್ಕಳನ್ನು ಕೊಲ್ಲುವ ಉದ್ದೇಶದಿಂದಲೇ ತನ್ನ ಮನೆಗೆ ಕರೆದೊಯ್ದು ಕುಡಿದ ಅಮಲಿನಲ್ಲಿ ಅವರನ್ನು ಹೊಡೆದು ಚಚ್ಚಿದ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಝಡೋಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಯ್ಯಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ಮಕ್ಕಳ ಕೊಲೆಗೈದ ವಧೇರಾನನ್ನು ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಪತ್ನಿಯ ಜತೆಗೆ ದಿನನಿತ್ಯವೆಂಬಂತೆ ಕುಡಿದು ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಂತ ಮಕ್ಕಳನ್ನು ಕೊಂದ ವಧೇರಾನನ್ನು ಇಂದು ಶುಕ್ರವಾರ ಕೋರ್ಟಿಗೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ