ಚೌಕಿದಾರನನ್ನು ತಡೆಯಲಾಗದು,ಯಾರನ್ನೂ ಬಿಡಲ್ಲ: ಮೋದಿ ಗುಡುಗು
Team Udayavani, Jan 12, 2019, 9:21 AM IST
ಹೊಸದಿಲ್ಲಿ: ಚೌಕಿದಾರನನ್ನು ಯಾರಿಂದಲೂ ತಡೆಯಲಾಗದು, ಭ್ರಷ್ಟಾಚಾರ, ಅನ್ಯಾಯ ಮಾಡುವ ಯಾರನ್ನೂ ಬಿಡುವವನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ನಿರಂತರ ವಾಗ್ಧಾಳಿ ನಡೆಸಿ ಚುನಾವಣಾ ರಣ ಕಹಳೆ ಮೊಳಗಿಸಿದ್ದಾರೆ.
ಹಿಂದಿನ ಸರ್ಕಾರಗಳು ರಾಷ್ಟ್ರವನ್ನು ಕತ್ತಲೆಯ ಕೂಪಕ್ಕೆ ನೂಕಿದ್ದವು ಎಂದ ಅವರು ಕೇಂದ್ರದ ಯಾವುದಾದರೂ ಯೋಜನೆಗೆ ನನ್ನ ಹೆಸರು ಹಾಕಿಕೊಂಡಿದ್ದೇನಾ? ಹಿಂದೆ ವ್ಯಕ್ತಿಗಳ ಹೆಸರಿನಿಂದ ಯೋಜನೆಗಳು ಆರಂಭವಾಗುತ್ತಿದ್ದವು. ನಮ್ಮ ಪಕ್ಷದ ಸಿದ್ಧಾಂತವೇ ಹಾಗೆ ಮೊದಲು ದೇಶ ಆ ಬಳಿಕ ವ್ಯಕ್ತಿ ಎಂದರು.
ಒಂದು ಕಾಲದಲ್ಲಿ ನಮ್ಮ ಪಕ್ಷ 2 ಕೋಣೆಗಳಲ್ಲಿ ಕಾರ್ಯ ನಡೆಸುತ್ತಿತ್ತು,ಇಂದು ಇಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯಕಾರಿಣಿ ನಡೆಯುತ್ತಿದೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನಾವು ನೆನೆಯಬೇಕಾಗಿದೆ. ಇದೇ ಮೊದಲ ಬಾರಿಗೆ ಅವರಿಲ್ಲದೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದೆ ಎಂದರು.
ಆಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮುಖ್ಯ ನ್ಯಾಯಾಧೀಶರ ಮೇಲೆ ಆರೋಪ ಹೊರಿಸಿ ಮಹಾವಿಯೋಗ ನಡೆಸಲು ಮುಂದಾಗಿತ್ತು. ತೀರ್ಪು ವಿಳಂಬವಾಗಲು ಕಾಂಗ್ರೆಸ್ ಕಾರಣವಾಗಿದೆ ಎಂದು ಕಿಡಿ ಕಾರಿದರು.
ನಮ್ಮ ಪ್ರತಿಯೋಜನೆಗೂ ಕಾಂಗ್ರೆಸ್ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಜಿಎಸ್ಟಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ಲೇವಡಿ ಮಾಡಿತ್ತು ಎಂದರು.
ನಿಮಗೆ ಯಾವ ರೀತಿಯ ಪ್ರಧಾನ ಸೇವಕ ಬೇಕು? ದಿನದ 18 ಗಂಟೆ ಕೆಲಸ ಮಾಡುವ ವ್ಯಕ್ತಿ ಬೇಕಾ? ಮೂರ್ನಾಲ್ಕು ತಿಂಗಳು ರಜೆ ತೆಗೆದುಕೊಂಡು ಹೋಗುವ ವ್ಯಕ್ತಿ ಬೇಕಾ ಎಂದು ರಾಹುಲ್ ಗಾಂಧಿಯವರನ್ನು ಪರೋಕ್ಷವಾಗಿ ಲೇವಡಿ ಮಾಡಿದರು.
ದೇಶದಲ್ಲಿ ಸಮರ್ಥ ಮತ್ತು ಪಾರದರ್ಶಕ ಆಡಳಿತ ನೀಡುವ ಗುರಿ ನಮ್ಮದು ಎಂದರು.
1 ಗಂಟೆ 23 ನಿಮಷಗಳ ಕಾಲ ಸುದೀರ್ಘ ಭಾಷಣವನ್ನು ಪ್ರಧಾನಿ ಮೋದಿ ಅವರು ಮಾಡಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು