ಪ್ರಯಾಗ್ರಾಜ್ನಲ್ಲಿ ಇಂದಿನಿಂದ “ಕುಂಭ’ ವೈಭವ
Team Udayavani, Jan 15, 2019, 12:30 AM IST
ಪ್ರಯಾಗ್ರಾಜ್: “ಚಲೋ ಕುಂಭ್ ಚಲೇ’ ಎಂಬ ಉದ್ಘೋಷದೊಂದಿಗೆ ಮಂಗಳವಾರ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಂಭಮೇಳದ ವೈಭವಕ್ಕೆ ಚಾಲನೆ ದೊರೆಯಲಿದೆ. ಈಗಾಗಲೇ ಲಕ್ಷಾಂತರ ಯಾತ್ರಿಕರು ವಿಶ್ವದಲ್ಲೇ ಅತಿದೊಡ್ಡ ಜನ ಸಮಾವೇಶ ಎಂಬ ಖ್ಯಾತಿಗೆ ಪಾತ್ರ ವಾಗಿರುವ ಕುಂಭಮೇಳವನ್ನು ಕಣ್ತುಂಬಿಕೊಳ್ಳಲು ಪ್ರಯಾಗ್ರಾಜ್ಗೆ ಆಗಮಿಸಿದ್ದಾರೆ.
ಹಲವು ಯಾತ್ರಿಕರು ಗಂಗೆ, ಯಮುನೆ ಮತ್ತು ಸರಸ್ವತಿಯ ಸಂಗಮ ಸ್ಥಳದಲ್ಲಿ ಪುಣ್ಯ ಸ್ನಾನ ಮಾಡಲೆಂದು ಸಾವಿರಾರು ಮೈಲುಗ ಳಿಂದ ಪಾದಯಾತ್ರೆಯಲ್ಲೇ ಬಂದು ತಲುಪಿ ದ್ದಾರೆ. ಉತ್ತರಪ್ರದೇಶಕ್ಕೆ ಉತ್ತರಪ್ರದೇಶವೇ ಈ ಅರ್ಧಕುಂಭಕ್ಕಾಗಿ ಸಿಂಗಾರಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಕುಂಭ ಕ್ಕಾಗಿಯೇ ವಿಶೇಷವಾಗಿ ತಾತ್ಕಾಲಿಕ ನಗರವನ್ನು ನಿರ್ಮಿಸಲಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡ ಟೆಂಪರರಿ ಸಿಟಿ ಎಂಬ ಹೆಗ್ಗಳಿಕೆ ಪಡೆದಿದೆ. ಇದರಲ್ಲಿ 250 ಕಿ.ಮೀ. ರಸ್ತೆ, 22 ಪಾಂಟೂನ್ ಬ್ರಿಡ್ಜ್, ಆಸ್ಪತ್ರೆಗಳು, ಪೊಲೀಸ್ ಠಾಣೆಗಳು, ಬ್ಯಾಂಕುಗಳು ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ.
ಆರ್ಎಫ್ ಟ್ಯಾಗ್: ಕುಂಭಕ್ಕೆ ಆಗಮಿಸುವ 14 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆರ್ಎಫ್ಐಡಿ(ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್) ಟ್ಯಾಗ್ ಅಳವಡಿಸಲು ಪೊಲೀಸರು ನಿರ್ಧರಿಸಿ ದ್ದಾರೆ. ಭಾರೀ ಸಂಖ್ಯೆಯಲ್ಲಿ ಯಾತ್ರಿಗಳು ಆಗಮಿಸುವ ಕಾರಣ ಮಕ್ಕಳು ಕೈತಪ್ಪಿ ಹೋಗುವ, ಕಣ್ಮರೆಯಾಗುವ ಸಾಧ್ಯತೆಯಿರುವ ಕಾರಣ, ಅಂಥ ಸಂದರ್ಭದಲ್ಲಿ ಅವರನ್ನು ಪತ್ತೆಹಚ್ಚಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಸಿಲಿಂಡರ್ ಸ್ಫೋಟ
ಕುಂಭಮೇಳ ಆರಂಭವಾಗುವ ಮುನ್ನಾ ದಿನವಾದ ಸೋಮವಾರ ಅಡುಗೆ ಅನಿಲ ಸಿಲಿಂಡರ್ವೊಂದು ಸ್ಫೋಟಗೊಂಡ ಘಟನೆ ಸಂಭವಿಸಿದೆ. ದಿಗಂಬರ ಅನಿ ಅಖಾಡಾದ ಟೆಂಟ್ನಲ್ಲಿ ಈ ಸ್ಫೋಟದಿಂ ದಾಗಿ ಬೆಂಕಿ ಹೊತ್ತಿಕೊಂಡಿದೆ. ಆದರೆ, ಯಾವುದೇ ಹಾನಿ ಸಂಭವಿಸಿಲ್ಲ. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಯೋಗಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ