153 ರೂ.ಗೆ 100 ಚಾನೆಲ್‌ ಆಯ್ಕೆ!​​​​​​​


Team Udayavani, Jan 15, 2019, 12:30 AM IST

tv.jpg

ನವದೆಹಲಿ: ಟಿವಿ ಚಾನೆಲ್‌ಗ‌ಳ ಆಯ್ಕೆ ವಿಚಾರದಲ್ಲಿ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲ ಈಗ ನಿವಾರಣೆಯ ಹಂತ ತಲುಪಿದೆ. ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಕೈಗೊಂಡ ಹೊಸ ನಿರ್ಧಾರ ಟಿವಿ ವೀಕ್ಷಕರಿಗೆ ಭಾರಿ ಅನುಕೂಲ ಮಾಡಿಕೊಟ್ಟಿದೆ. 

ಈ ಮೊದಲಿದ್ದಂತೆ 100 ಉಚಿತ ಚಾನೆಲ್‌ಗ‌ಳನ್ನು 130 ರೂ. ದರದಲ್ಲಿ ಆಯ್ಕೆ ಮಾಡಿಕೊಳ್ಳುವ ಅವಕಾಶದ ಬದಲಿಗೆ, 100 ಉಚಿತ ಅಥವಾ ಪಾವತಿ ಸಹಿತ ಚಾನೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಟಿವಿ ವೀಕ್ಷಕರಿಗೆ ಟ್ರಾಯ್‌ ನೀಡಿದೆ. ಇದಕ್ಕೆ ಜಿಎಸ್‌ಟಿ ಸಹಿತ 153 ರೂ. ಪಾವತಿ ಮಾಡಬೇಕಾಗುತ್ತದೆ.

ಸದ್ಯದ ನಿಯಮದ ಪ್ರಕಾರ 100 ಉಚಿತ ಚಾನೆಲ್‌ಗ‌ಳನ್ನು 130 ರೂ. ದರದಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಅದರ ನಂತರದಲ್ಲಿ ಪಾವತಿ ಚಾನೆಲ್‌ಗ‌ಳನ್ನು ಪಡೆಯಲು ಪ್ರತಿ ಚಾನೆಲ್‌ಗೆ ಹೆಚ್ಚುವರಿ ಹಣ ತೆರಬೇಕಾಗಿತ್ತು. ಪಾವತಿ ಚಾನೆಲ್‌ಗೆ 25 ಪೈಸೆಯಿಂದ 24 ರೂ.ವರೆಗೂ ದರವಿತ್ತು. ಇದರಿಂದಾಗಿ ಮಾಸಿಕ ಟಿವಿ ವೀಕ್ಷಣೆ ಬಿಲ್‌ ಜಾಸ್ತಿಯಾಗುವ ಆತಂಕ ವೀಕ್ಷಕರಿಗೆ ಎದುರಾಗಿತ್ತು. ಆದರೆ ಹಲವು ಸುತ್ತಿನಲ್ಲಿ ಟಿವಿ ವಾಹಿನಿ ಸಂಸ್ಥೆಗಳು, ಕೇಬಲ್‌ ಹಾಗೂ ಡಿಟಿಎಚ್‌ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಟ್ರಾಯ್‌ ನಿಯಮಕ್ಕೆ ಪರಿಷ್ಕರಣೆ ಮಾಡಿದೆ. ಜ.31ರೊಳಗೆ ಇದನ್ನು ಪಡೆದುಕೊಳ್ಳಬೇಕಾಗಿದೆ. 

ಇದರೊಂದಿಗೆ ಟ್ರಾಯ್‌ ಕೈಗೊಂಡ ಇನ್ನೊಂದು ಪ್ರಮುಖ ನಿರ್ಧಾರವೆಂದರೆ ಯಾವುದೇ ಚಾನೆಲ್‌ಗೆ ದರವು 19 ರೂ. ಅನ್ನು ಮೀರುವಂತಿಲ್ಲ. ಈ ಹಿಂದೆ 24 ರೂ.ಗಳವರೆಗೂ ಚಾನೆಲ್‌ಗೆ ದರ ನಿಗದಿಪಡಿಸಲಾಗಿತ್ತು.

ಏನಿದು ಹೊಸ ನಿಯಮ?
ಜಿಎಸ್‌ಟಿ ಸೇರಿದಂತೆ ಮಾಸಿಕ 153.40 ರೂ.ಗೆ ಜನರು 100 ಚಾನೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಈ 100 ಚಾನೆಲ್‌ಗ‌ಳಲ್ಲಿ ಪಾವತಿ ಚಾನೆಲ್‌ಗ‌ಳೂ ಇರಬಹುದು. ಆದರೆ ಆಯ್ಕೆ ಮಾಡಿದ ಚಾನೆಲ್‌ಗ‌ಳ ದರವು 130 ರೂ. ಅನ್ನು ಮೀರುವಂತಿಲ್ಲ. ಅಂದರೆ 13 ರೂ. ಬೆಲೆಯ 10 ಚಾನೆಲ್‌ಗ‌ಳನ್ನಷ್ಟೇ ಗ್ರಾಹಕರು ಆಯ್ಕೆ ಮಾಡಿಕೊಳ್ಳಬಹುದು. ಇದೇ 130 ರೂ.ಗಳಲ್ಲಿ ಗ್ರಾಹಕರು ತಮಗೆ ಇಷ್ಟವಾದ ಪ್ಯಾಕ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ ಎಚ್‌ಡಿ ಚಾನೆಲ್‌ಗ‌ಳ ಬಗ್ಗೆ ಟ್ರಾಯ್‌ ತನ್ನ ಪ್ರಕಟಣೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ. ಒಂದು ಮೂಲದ ಪ್ರಕಾರ ಒಂದು ಎಚ್‌ಡಿ ಚಾನೆಲ್‌ ಅನ್ನು ಎರಡು ಎಸ್‌ಡಿ ಚಾನೆಲ್‌ ಎಂದು ಸಂಖ್ಯೆಯ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ. ಆದರೆ ಇನ್ನೊಂದು ಮೂಲದ ಪ್ರಕಾರ ಈ 130 ರೂ. ಒಳಗೆ ಕೇವಲ ಎಸ್‌ಡಿ ಚಾನೆಲ್‌ ಮಾತ್ರ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಎಚ್‌ಡಿ ಚಾನೆಲ್‌ಗೆ ಹೆಚ್ಚುವರಿ ಪಾವತಿ ಮಾಡಬೇಕಿರುತ್ತದೆ.

ಸದ್ಯ ಕನ್ನಡದ ಎಚ್‌ಡಿ ಚಾನೆಲ್‌ಗ‌ಳನ್ನು ಹೊರತುಪಡಿಸಿ ಎಲ್ಲ ಪಾವತಿ ಚಾನೆಲ್‌ಗ‌ಳನ್ನು ಲೆಕ್ಕ ಹಾಕಿದರೆ 137 ರೂ. ಆಗಲಿದ್ದು, 15 ಚಾನೆಲ್‌ಗ‌ಳು ಲಭ್ಯವಾಗಲಿವೆ. ಉಳಿದ 85 ಉಚಿತ ಚಾನೆಲ್‌ಗ‌ಳನ್ನು ಗ್ರಾಹಕರು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.