ಮಹಾರಾಷ್ಟ್ರ; ನರ್ಮದಾ ನದಿಯಲ್ಲಿ ಹಡಗು ಮುಳುಗಡೆ, 6 ಮಂದಿ ಜಲಸಮಾಧಿ
Team Udayavani, Jan 15, 2019, 12:48 PM IST
ಮಹಾರಾಷ್ಟ್ರ: ಹಡಗು ಮುಳುಗಿದ ಪರಿಣಾಮ ಆರು ಮಂದಿ ಜಲಸಮಾಧಿಯಾಗಿರುವ ಘಟನೆ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ನರ್ಮದಾ ನದಿಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹಡಗಿನಲ್ಲಿದ್ದ ಸುಮಾರು 36 ಮಂದಿಯನ್ನು ಈವರೆಗೆ ರಕ್ಷಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ. ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಗಂಗಾ ಪೂಜೆಗಾಗಿ ಹಡಗಿನಲ್ಲಿ ಸುಮಾರು 60 ಮಂದಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ಮುಳುಗು ತಜ್ಞರು ಹಾಗೂ ರಕ್ಷಣಾ ತಂಡ ಆಗಮಿಸಿದ್ದು ಕಾರ್ಯಾಚರಣೆ ಮುಂದುವರಿಸಿದೆ. ಬುಡಕಟ್ಟು ಜನರನ್ನು ಹೊಂದಿರುವ ಜಿಲ್ಲೆಯಾದ ಉತ್ತರ ಮಹಾರಾಷ್ಟ್ರದ ಗ್ರಾಮದ ನಿವಾಸಿಗಳು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್