ಜಾಹೀರಾತು ನಿಷೇಧ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು


Team Udayavani, Dec 18, 2018, 12:18 PM IST

highcourt.jpg

ಬೆಂಗಳೂರು: ನಗರದಲ್ಲಿ ಎಲ್ಲ ಮಾದರಿಯ ಜಾಹೀರಾತುಗಳನ್ನು ನಿಷೇಧಿಸಿರುವ ಬಿಬಿಎಂಪಿಯ ಕ್ರಮ ಸಾಂವಿಧಾನಿಕ ಮೂಲಭೂತ ಹಕ್ಕುಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಜೀವಿಸುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಖಾಸಗಿ ಜಾಹೀರಾತುದಾರರು ಸೋಮವಾರ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಹಾಗೂ ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ಸ್‌ ಮತ್ತು ಬ್ಯಾನರ್‌ಗಳ ತೆರವು ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌. ಸುಜಾತ ಅವರಿದ್ದ ನ್ಯಾಯಪೀಠ ನಡೆಸಿತು. 

ವಿಚಾರಣೆ ವೇಳೆ ಖಾಸಗಿ ಜಾಹೀರಾತುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, ಜಾಹೀರಾತು ಪ್ರದರ್ಶನವು ಸಂವಿಧಾನದ ಪರಿಚ್ಛೇದ 19 (1) (ಅ) ಪ್ರಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಾಪ್ತಿಗೆ ಬರುತ್ತದೆ. ಇಲ್ಲಿ ವಾಣಿಜ್ಯ ಉದ್ದೇಶದ ಜಾಹೀರಾತು ಪ್ರದರ್ಶನವನ್ನು “ವಾಣಿಜ್ಯ ಅಭಿವ್ಯಕ್ತಿ’ (ಕಮರ್ಷಿಯಲ್‌ ಸ್ಪೀಚ್‌) ಎಂದು ಪರಿಭಾಷಿಸಲಾಗಿದೆ.

ಸಂವಿಧಾನದ ಈ ಪರಿಚ್ಛೇದ ಪ್ರಕಾರ ಕಾನೂನುಬದ್ಧ ಜಾಹೀರಾತು ಪ್ರದರ್ಶನವನ್ನು ನಿಷೇಧಿಸಲು ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಕೌನ್ಸಿಲ್‌ ಸಭೆಯ ನಿರ್ಣಯದಂತೆ ಬಿಬಿಎಂಪಿ ಜಾಹೀರಾತುಗಳನ್ನು ನಿಷೇಧಿಸಿದೆ. ಆದರೆ. ಕೌನ್ಸಿಲ್‌ ಸಭೆಯ ನಿರ್ಣಯ ಕಾನೂನು ಅಲ್ಲ. ಅರ್ಜಿದಾರ ಜಾಹೀರಾತುದಾರರು ಕಾನೂನು ಬದ್ಧ ಪರವಾನಗಿ ಪಡೆದುಕೊಂಡವರಾಗಿದ್ದಾರೆ.

ಈ ಜಾಹೀರಾತುದಾರರು ಅಳವಡಿಸಿರುವ ಜಾಹೀರಾತು ಫ‌ಲಕಗಳು ಖಾಸಗಿ ಆಸ್ತಿಗಳಲ್ಲಿವೆ. ಅಲ್ಲದೇ ಎಲ್ಲ ರೀತಿಯ ತೆರಿಗೆಗಳನ್ನು, ಶುಲ್ಕಗಳನ್ನು ನಿಯಮಿತವಾಗಿ ಪಾವತಿಸಲಾಗುತ್ತಿದೆ. ಆದರೆ, ಕೌನ್ಸಿಲ್‌ ಸಭೆಯ ನಿರ್ಣಯ ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಆಸರೆಯಾಗಿಟ್ಟುಕೊಂಡು ಬಿಬಿಎಂಪಿ ತಮ್ಮ ಕಕ್ಷಿದಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ನಡೆದುಕೊಳ್ಳುತ್ತಿದೆ. ನ್ಯಾಯಾಲಯದ ತಡೆಯಾಜ್ಞೆ ಇರುವ ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಲಾಗುತ್ತಿದೆ ನ್ಯಾಯಪೀಠಕ್ಕೆ ವಿವರಿಸಿದರು. 

ಹಕ್ಕು ಉಲ್ಲಂಘನೆ: ಬಿಬಿಎಂಪಿ ಜಾಹೀರಾತು ನಿಷೇಧ ಮಾಡಿರುವುದು ಸಂವಿಧಾನದ ಪರಿಚ್ಛೇದ 21ರ “ಜೀವಿಸುವ ಹಕ್ಕಿನ’ ಉಲ್ಲಂಘನೆಯಾಗಿದೆ. ನಗರದಲ್ಲಿ ಸುಮಾರು 2 ಸಾವಿರ ಜಾಹೀರಾತು ಸಂಸ್ಥೆಗಳಿವೆ. ಸುಮಾರು 1.50 ಲಕ್ಷ ಕುಟುಂಬಗಳು ಈ ಉದ್ಯಮವನ್ನು ನೆಚ್ಚಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ವಹಿವಾಟು ಸ್ಥಗಿತಗೊಂಡಿದ್ದರಿಂದ ಬಡ ಹಾಗೂ ಮಧ್ಯಮ ವರ್ಗದ 1.50 ಲಕ್ಷ ಕುಟುಂಬಗಳು ಬೀದಿಗೆ ಬಿದ್ದಿವೆ.

ಜಾಹೀರಾತು ಕಂಪನಿಗಳು ನಷ್ಟ ಅನುಭವಿಸುವಂತಾಗಿದೆ. ಕನಿಷ್ಠ ಕ್ರಿಸ್‌ಮಸ್‌ ಹಬ್ಬಕ್ಕಾದರೂ ಅವಕಾಶ ಮಾಡಿಕೊಡಲು, ಜಾಹೀರಾತು ಪ್ರದರ್ಶನಕ್ಕೆ ಅನುಮತಿ ಕೊಡಬೇಕು ಎಂದು ವಕೀಲರು ಕೋರಿದರು. ಇದೇ ವೇಳೆ ಫ್ಲೆಕ್ಸ್‌ ತಯಾರಕರ ಪರ ವಕೀಲರು ವಾದಿಸಿ, “ಫ್ಲೆಕ್ಸ್‌ ಪ್ಲಾಸ್ಟಿಕ್‌ ಅಲ್ಲ. ಆದರೆ, ಪ್ಲಾಸ್ಟಿಕ್‌ ನಿಷೇಧದಡಿ ಫ್ಲೆಕ್ಸ್‌ ಪರಿಗಣಿಸಿ ಅದನ್ನೂ ನಿಷೇಧಿತ ಎಂದು ಭಾವಿಸಲಾಗಿದೆ.

ಫ್ಲೆಕ್ಸ್‌ ಪುನರ್ಬಳಕೆ ಮಾಡಬಹುದಾದ ಮತ್ತು ಪರಿಸರಕ್ಕೆ ಹೆಚ್ಚು ಹಾನಿಕಾರ ವಸ್ತು ಅಲ್ಲ ಎಂದು “ರಾಷ್ಟೀಯ ಹಸಿರು ನ್ಯಾಯಾಧೀಕರಣ’ ತೀರ್ಪು ನೀಡಿದೆ. ಆದ್ದರಿಂದ ಫ್ಲೆಕ್ಸ್‌ ತಯಾರಿಸಲು ಅನುಮತಿ ಕೊಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಂಗಳವಾರ (ಡಿ.18) ಮುಂದೂಡಿತು.

ಡಿ.20ರೊಳಗೆ ಬೊಮ್ಮನಹಳ್ಳಿ ವಲಯ ರಸ್ತೆ ಗುಂಡಿ ಮುಕ್ತವಾಗಲಿ: ಇದೇ ವೇಳೆ ಬೊಮ್ಮನಹಳ್ಳಿ ವಲಯವನ್ನು ಡಿ.20ರೊಳಗೆ ಸಂಪೂರ್ಣ ರಸ್ತೆ ಗುಂಡಿ ಮುಕ್ತ ಮಾಡಬೇಕು ಎಂದು ಬಿಬಿಎಂಪಿಗೆ ಗಡುವು ನೀಡಿದ ಹೈಕೋರ್ಟ್‌, ಈ ಕಾಮಗಾರಿಗೆ ಸಂಬಂಧಿಸಿದಂತೆ ಆ ವಲಯದ ಮುಖ್ಯ ಇಂಜಿನಿಯರ್‌ಗಳು ಪರಿಶೀಲಿಸಿ ಸಹಿ ಮಾಡಿದ  “ಮೇಜರ್‌ವೆುಂಟ್‌ ಬುಕ್‌’ ಕೋರ್ಟ್‌ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿತು.

ಅರ್ಜಿ ವಿಚಾರಣೆ ವೇಳೆ, ಬಿಬಿಎಂಪಿ ಪರ ವಕೀಲರು ಮಹದೇವಪುರ ವಲಯದ ಕಾರ್ಯಪ್ರಗತಿ ವರದಿಯನ್ನು ನ್ಯಾಯಪೀಠಕ್ಕೆ ಮಂಡಿಸಿದರು. ರಸ್ತೆ ಗುಂಡಿ ಮುಚ್ಚುವ ಬಿಬಿಎಂಪಿ ಕೆಲಸ ಪೂರ್ಣಗೊಂಡಿದೆ. ಆದರೆ, ಜಲಮಂಡಳಿಯ ಕಾಮಗಾರಿಗಳಿಂದಾಗಿ ಕೆಲವೊಂದು ಕಡೆ ಆಗಿಲ್ಲ ಎಂದರು. ಅಲ್ಲದೇ ಬೆಸ್ಕಾಂ, ಬಿಎಂಆರ್‌ಸಿಎಲ್‌, ಜಿಎಐಎಲ್‌ ಕಾಮಗಾರಿಗಳಿಂದಲೂ ಒಂದಿಷ್ಟು ಕಡೆ ಹಿನ್ನಡೆಯಾಗಿದೆ ಎಂದರು.

ಇದಕ್ಕೆ ಆಕ್ಷೇಪಿಸಿದ ಜಲಮಂಡಳಿ ಪರ ವಕೀಲರು, ಸೂರಿಕೆ, ದುರಸ್ತಿ ಹೊಸ ಪೈಪ್‌ಗ್ಳ ಅಳವಡಿಕೆ ಕುರಿತ ಬಿಬಿಎಂಪಿಯ ಎಲ್ಲ ದೂರುಗಳನ್ನು ಜಲಮಂಡಳಿ ಪೂರ್ಣಗೊಳಿಸಿದೆ. ನಗರದ ಪ್ರತಿಷ್ಠಿತ ವಾಣಿಜ್ಯ ಪ್ರದೇಶಗಳಲ್ಲಿ ದೊಡ್ಡ ರೆಸ್ಟೋರೆಂಟ್‌ಗಳು ಮಧ್ಯರಾತ್ರಿ ಮ್ಯಾನ್‌ಹೋಲ್‌ನ ಮುಚ್ಚಳ ತೆರೆದು ತ್ಯಾಜ್ಯಗಳನ್ನು ಸುರಿಯುತ್ತಿದ್ದಾರೆ ಎಂದು ಇದು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.