ಆಪರೇಷನ್ ಎಂಪಿ?
Team Udayavani, Jan 17, 2019, 12:30 AM IST
ಹೊಸದಿಲ್ಲಿ: ಕರ್ನಾಟಕದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸರಕಾರದ ವಿರುದ್ಧದ ಬಿರುಗಾಳಿ ತಣ್ಣಗಾಗುತ್ತಿರುವಂತೆ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಕುಸಿಯುವ ಆತಂಕ ಎದುರಾಗಿದೆ. ಕರ್ನಾಟಕಕ್ಕಿಂತ ಹೆಚ್ಚಾಗಿ ಮಧ್ಯ ಪ್ರದೇಶ ಸರಕಾರವನ್ನು ಉರುಳಿಸುವ ಉತ್ಸುಕತೆ ಬಿಜೆಪಿ ವರಿಷ್ಠರಿಗೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ನ ಹಿರಿಯ ಮುಖಂಡರಲ್ಲೇ ಆತಂಕ ವಿದೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಅಷ್ಟು ಸುಲಭದಲ್ಲಿ ಸರಕಾರವನ್ನು ಉರುಳಿಸಲು ಸಾಧ್ಯವಿಲ್ಲ. ಆದರೆ ಮಧ್ಯಪ್ರದೇಶದಲ್ಲಿನ ಕಮಲನಾಥ್ ಸರಕಾರ ಉರುಳಿಸುವುದು ಸುಲಭ ಎಂದು ಹೇಳಲಾಗಿದೆ. ಕಳೆದ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಮಧ್ಯ ಪ್ರದೇಶದಲ್ಲಿ 15 ವರ್ಷಗಳ ಸರಕಾರವನ್ನು ಅತ್ಯಂತ ಕಡಿಮೆ ಅಂತರದಲ್ಲಿ ಬಿಜೆಪಿ ಕಳೆದು ಕೊಂಡಿದೆ.
ಈಗ ಬಹುಮತಕ್ಕೆ ಕೇವಲ ಏಳು ಶಾಸಕರ ಅಗತ್ಯವನ್ನು ಬಿಜೆಪಿ ಹೊಂದಿದೆ. ಕೆಲವು ಶಾಸಕರು ಬಿಜೆಪಿ ಕಡೆ ವಾಲಿ ದರೂ ಸರಕಾರ ಪತನ ವಾಗು ವುದು ಖಚಿತ. ಹೀಗಾಗಿ ಯಾವುದೇ ಕ್ಷಣ ದಲ್ಲೂ ಸ್ವತಂತ್ರ ಹಾಗೂ ಇತರ ಶಾಸಕರನ್ನು ಓಲೈಸುವ ಸಾಧ್ಯತೆ ನಿರಾಕರಿಸುವಂತಿಲ್ಲ ಎನ್ನಲಾಗಿದೆ.
ಸರಕಾರವು ಪ್ರಸ್ತುತ ನಾಲ್ವರು ಸ್ವತಂತ್ರ ಶಾಸಕರು, ಇಬ್ಬರು ಬಿಎಸ್ಪಿ ಶಾಸಕರು ಮತ್ತು ಎಸ್ಪಿ ಬೆಂಬಲವನ್ನು ಹೊಂದಿದೆ. ಅದಾಗಲೇ ಬಿಎಸ್ಪಿ ತನ್ನ ಬೆಂಬಲ ಹಿಂದೆಗೆದುಕೊಳ್ಳುವ ಬೆದರಿಕೆ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ