ಲೇಹ್‌ಗೆ ಐಟಿಬಿಪಿ ನಿಯೋಜನೆ


Team Udayavani, Jan 18, 2019, 12:30 AM IST

39.jpg

ಹೊಸದಿಲ್ಲಿ: ಭಾರತ-ಚೀನ ಗಡಿಯಲ್ಲಿ ಚೀನ ಸೇನೆ ನಿಯೋಜನೆ ಹೆಚ್ಚುತ್ತಿರುವುದರಿಂದ ಭಾರತ ಕೂಡ ಈ ಭಾಗದ ಗಡಿಯನ್ನು ಭದ್ರಗೊಳಿಸಲು ನಿರ್ಧರಿಸಿದೆ. ಇದಕ್ಕಾಗಿ ಚಂಡೀಗಢದಲ್ಲಿರುವ ಐಟಿಬಿಪಿ ಪಡೆಯನ್ನು ಲೇಹ್‌ಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಇದರಿಂದಾಗಿ ಸೇನೆಯ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಚೀನ ಗಡಿ ಶಾಂತವಾಗಿದ್ದಾಗ ಕಾಯಲೆಂದೇ ಐಟಿಬಿಪಿಯನ್ನು ರಚಿಸಲಾಗಿದ್ದು, ಈ ಪಡೆ 3,488 ಕಿ.ಮೀ ಗಡಿಯಲ್ಲಿದೆ. ಆದರೆ ಲೇಹ್‌ನಲ್ಲಿ ಸೇನೆಯೇ ಈ ಕೆಲಸ ಮಾಡುತ್ತಿದೆ. ಇದೀಗ ಲೇಹ್‌ನಲ್ಲಿ ಸೇನೆಯ ಜೊತೆಗೆ ಐಟಿಬಿಪಿ ಕೂಡ ಗಡಿ ಪಹರೆ ನಡೆಸಲಿದೆ. ಕಳೆದ ಕೆಲವೇ ದಿನಗಳ ಹಿಂದೆ ಸರಕಾರ‌ ಈ ಆದೇಶ ಹೊರಡಿಸಿದ್ದು, ಮಾರ್ಚ್‌ ಒಳಗೆ ಇಡೀ ಚಂಡೀಗ‌ಢ ನೆಲೆಯನ್ನು ಲೇಹ್‌ಗೆ ಸ್ಥಳಾಂತರಿಸಿ, ಎಪ್ರಿಲ್‌ 1ರಿಂದ ಕಾರ್ಯನಿರ್ವಹಿಸಲು ಸಿದ್ಧರಾಗಿ ಎಂದು ಸೂಚನೆ ನೀಡಿದೆ.

ಲೆ| ಜನರಲ್‌ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ಸೇನೆಯ ಪಡೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, 1999ರಲ್ಲಿ ಕಾರ್ಗಿಲ್‌ ಕದನ ನಡೆದ ಅನಂತರದಿಂದಲೂ ಐಟಿಬಿಪಿಯಿಂದ ಸಹಕಾರಕ್ಕಾಗಿ ಕೋರಲಾಗಿತ್ತು. ಆದರೆ ಸರಕಾರ‌ಗಳು ಈ ಬೇಡಿಕೆಯನ್ನು ನಿರಾಕರಿಸುತ್ತಲೇ ಬಂದಿದ್ದವು. 2015ರಲ್ಲಿ ಸರಕಾರ‌ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿತ್ತಾದರೂ ಆಡಳಿತಾತ್ಮಕ ಕಾರಣಗಳಿಗಾಗಿ ಇದು ಸಾಧ್ಯವಾಗಿರಲಿಲ್ಲ.

ಪಾಕ್‌ಗಿಂತ ಒಂದು ಹೆಜ್ಜೆ ಮುಂದಿದ್ದೇವೆ!: ಗಡಿಯಲ್ಲಿ ಕದನ ವಿರಾಮ ಉಲ್ಲಂ ಸುತ್ತಿರುವ ಪಾಕಿಸ್ಥಾನಕ್ಕೆ ನಾವು ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಪಾಕ್‌ಗಿಂತ ನಾವು ಒಂದು ಹೆಜ್ಜೆ ಮುಂದಿದ್ದೇವೆ ಎಂದು ಉತ್ತರ ಸೇನಾ ಕಮಾಂಡರ್‌ ಲೆ|ಜ| ರಣಬೀರ್‌ ಸಿಂಗ್‌ ಹೇಳಿದ್ದಾರೆ. ಕಾಶ್ಮೀರದ ಪೂಂಛ… ಜಿಲ್ಲೆಯಲ್ಲಿ ಕಲೈ ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, 2018ರಲ್ಲಿ 250ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದ್ದೇವೆ. 54 ಜನರನ್ನು ಜೀವಂತ ಸೆರೆಹಿಡಿದಿದ್ದು, 4 ಉಗ್ರರು ಶರಣಾಗಿದ್ದಾರೆ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ ಹೆಚ್ಚುತ್ತಿದ್ದು, ಐವರು ಪಾಕ್‌ ಯೋಧರನ್ನು ಹತ್ಯೆಗೈಯಲಾಗಿದೆ ಎಂದಿದ್ದಾರೆ.

ಉಗ್ರರಿಂದ ಗ್ರೆನೇಡ್‌ ದಾಳಿ: ಮೂವರು ಪೊಲೀಸರಿಗೆ ಗಾಯ
ಶ್ರೀನಗರದಲ್ಲಿ ಗುರುವಾರ ಭದ್ರತಾ ಪಡೆಯ ಮೇಲೆ ಉಗ್ರರು ಗ್ರೆನೇಡ್‌ ದಾಳಿ ನಡೆಸಿದ್ದು, ಮೂವರು ಟ್ರಾಫಿಕ್‌ ಪೊಲೀಸರು ಗಾಯಗೊಂಡಿದ್ದಾರೆ. ನ್ಯಾಶನಲ್‌ ಕಾನ್ಫರೆನ್ಸ್‌ ಪ್ರಧಾನ ಕಚೇರಿ ಹಾಗೂ ಆಲ್‌ ಇಂಡಿಯಾ ರೇಡಿಯೋದ ಸ್ಥಳೀಯ ಕಚೇರಿಯಿಂದ 100 ಮೀಟರ್‌ ದೂರದಲ್ಲಿ ಈ ದಾಳಿ ನಡೆದಿದೆ. ಕೂಡಲೇ ಎಚ್ಚೆತ್ತ ಭದ್ರತಾ ಪಡೆ, ಶೋಧ ಕಾರ್ಯ ಆರಂಭಿಸಿದ್ದು, ಉಗ್ರರ ಪತ್ತೆಗೆ ಬಲೆ ಬೀಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕ್‌ನಿಂದ ಗುಂಡಿನ ದಾಳಿ
ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ ಮುಂದುವರಿದಿದೆ. ಗುರುವಾರವೂ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕ್‌ ಪಡೆ ಶೆಲ್‌ ದಾಳಿ ನಡೆಸಿದೆ. ಪರಿಣಾಮ ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಭಾರತ-ಪಾಕ್‌ ಗಡಿಯಲ್ಲಿ 2018ರಲ್ಲಿ ಬರೋಬ್ಬರಿ 2,936 ಬಾರಿ ಪಾಕಿಸ್ಥಾನವು ಕದನ ವಿರಾಮ ಉಲ್ಲಂ ಸಿದೆ. ಇದು ಕಳೆದ 15 ವರ್ಷಗಳಲ್ಲೇ ಅತಿ ಹೆಚ್ಚು ಎಂದು ಸೇನಾ ಮೂಲಗಳು ತಿಳಿಸಿವೆ.

ಉಮರ್‌ ಅಬ್ದುಲ್ಲಾ ವಿವಾದ
ಕಳೆದ ವರ್ಷ ಕಣಿವೆ ರಾಜ್ಯದಲ್ಲಿ ಅತ್ಯಧಿಕ ಉಗ್ರರನ್ನು ಸದೆಬಡಿಯಲಾಗಿದೆ ಎಂಬ ಸೇನೆಯ ಮಾಹಿತಿಯನ್ನು ಉಲ್ಲೇಖೀಸಿ ವ್ಯಂಗ್ಯ ಮಾಡುವ ಮೂಲಕ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ವಿವಾದ ಸೃಷ್ಟಿಸಿದ್ದಾರೆ. ನನ್ನ ಪ್ರಕಾರ, “ಒಬ್ಬನೇ ಒಬ್ಬ ಯುವಕನೂ ಉಗ್ರ ಸಂಘಟನೆಗೆ ಸೇರ್ಪಡೆಯಾಗದೇ ಇರುತ್ತಿದ್ದರೆ, ಎನ್‌ಕೌಂಟರ್‌ನಲ್ಲಿ ಯಾವ ಭಯೋತ್ಪಾದಕನೂ ಸಾಯದೇ ಇರುತ್ತಿದ್ದರೆ, ಯಾವ ಯೋಧನೂ ಹುತಾತ್ಮನಾಗದೇ ಇರುತ್ತಿದ್ದರೆ ಅಂಥ ವರ್ಷವನ್ನು ಶ್ರೇಷ್ಠ ವರ್ಷ ಎಂದು ಹೇಳಬಹುದು’ ಎಂದು ಉಮರ್‌ ಟ್ವೀಟ್‌ ಮಾಡಿದ್ದಾರೆ. ಅವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.