ಗೃಹ ಇಲಾಖೆಗೆಂದೇ ಇಸ್ರೋದಿಂದ ಉಪಗ್ರಹ
Team Udayavani, Jan 18, 2019, 12:30 AM IST
ಹೊಸದಿಲ್ಲಿ: ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಮುಂಚೂಣಿ ನೆಲೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯಕ್ಕಾಗಿಯೇ ವಿಶೇಷವಾದ ಉಪಗ್ರಹವೊಂದನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಉಡಾವಣೆ ಮಾಡಲಿದೆ.
ಗಡಿ ನಿರ್ವಹಣೆ ಸುಧಾರಿಸಲು ಬಾಹ್ಯಾಕಾಶ ತಂತ್ರಜ್ಞಾನಗಳನ್ನು ಬಳಸುವ ಕುರಿತು ಕಾರ್ಯಪಡೆಯೊಂದು ಸಲ್ಲಿಸಿದ್ದ ಶಿಫಾರಸಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಸ್ರೋ ಮತ್ತು ರಕ್ಷಣಾ ಸಚಿವಾಲಯದ ಸಹಭಾಗಿತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಇದಕ್ಕಾಗಿ ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಯೋಜನೆಗಳನ್ನು ರೂಪಿಸಲಾಗಿದೆ.
ಭದ್ರತೆ, ಕಾರ್ಯಾಚರಣೆಗಳ ಯೋಜನೆ ಮತ್ತು ಗಡಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಬಾಹ್ಯಾಕಾಶ ಸಂಪನ್ಮೂಲಗಳನ್ನು ಬಳಸುವಂತೆ ಮಾಡುವ ಮೂಲಕ ಗಡಿ ಭದ್ರತಾ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವುದು ಕೂಡ ಇದರ ಉದ್ದೇಶವಾಗಿದೆ. ಅಲ್ಪಾವಧಿ ಯೋಜನೆಯನ್ವಯ, ಯೋಧರಿಗೆ ಹೈ ರೆಸೊಲ್ಯೂಷನ್ ಇಮೇಜರಿ ಮತ್ತು ಸಂವಹನ ತಂತ್ರಜ್ಞಾನ ಪೂರೈಸಿದರೆ, ಮಧ್ಯಮಾವಧಿ ಯೋಜನೆಯನ್ವಯ ಗೃಹ ಇಲಾಖೆಯ ಬಳಕೆಗೆಂದೇ ಇಸ್ರೋದಿಂದ ಉಪಗ್ರಹ ಉಡಾವಣೆ ಮಾಡಲಾಗುತ್ತದೆ. ದೀರ್ಘಾವಧಿ ಯೋಜನೆಯಲ್ಲಿ, ಸಂಬಂಧಪಟ್ಟ ಸಂಸ್ಥೆಗಳಿಗೆ ಗೃಹ ಇಲಾಖೆಯು ಉಪಗ್ರಹದ ಮಾಹಿತಿಗಳನ್ನು ಹಂಚಿಕೊಳ್ಳಲಿದೆ.
ಯೋಧರನ್ನು ದುರ್ಗಮ ಪ್ರದೇಶದಲ್ಲಿ ನಿಯೋಜಿಸಿದಾಗಲೂ ಉಪಗ್ರಹ ಮೂಲಕ ಅವರಿಗೆ ದಾರಿ ಮತ್ತು ಇತರ ಮಾಹಿತಿಗಳನ್ನು ಈ ಮೂಲಕ ನೀಡಲು ಅನುಕೂಲವಾಗಲಿದೆ. ಗಡಿ ಪ್ರದೇಶ ಮಾತ್ರವಲ್ಲದೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿಯೂ ಇದರ ಉಪಯೋಗ ಪಡೆಯಲು ನಿರ್ಧರಿಸಲಾಗಿದೆ. ಆರಂಭದಲ್ಲಿ ಗಡಿ ನಿಯಂತ್ರಣ ಪಡೆಗೆ ಅನಂತರ ಇತರ ವಿಭಾಗಗಳಿಗೂ ಈ ಸೌಲಭ್ಯ ವಿಸ್ತರಿಸುವ ಯೋಜನೆ ಹೊಂದಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್