ಮೂವರು ಉಗ್ರರ ಎನ್ಕೌಂಟರ್
Team Udayavani, Jan 23, 2019, 12:30 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ವಿಶೇಷವೆಂದರೆ, ಹತ ಉಗ್ರರ ಪೈಕಿ ಒಬ್ಟಾತ ಕಣಿವೆ ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಹೆಫ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧಾರದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆ ಮೇಲೆ ಗುಂಡು ಹಾರಿಸತೊಡಗಿದರು. ಸುಮಾರು 7 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯಿತು. ಜತೆಗೆ, ಘಟನಾ ಸ್ಥಳದಿಂದ ಭಾರೀ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದೆ. ಐಪಿಎಸ್ ಅಧಿಕಾರಿಯ ಸಹೋದರ ಶಂಶುಲ್ ಹಖ್ನನ್ನು ಮುಖ್ಯವಾಹಿನಿಗೆ ಕರೆತರಲು ಕುಟುಂಬ ಸದಸ್ಯರು ಎಷ್ಟೇ ಪ್ರಯತ್ನಿಸಿದರೂ ಅದು ಯಶಸ್ವಿಯಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ರಕರ್ತರಿಗೂ ಗಾಯ: ಎನ್ಕೌಂಟರ್ ಮುಗಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಭದ್ರತಾ ಪಡೆ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೆಲ್ಲೆಟ್ ಬಳಕೆ ಮಾಡಲಾಗಿದ್ದು, ಐವರು ಪತ್ರಕರ್ತರೂ ಗಾಯಗೊಂಡಿದ್ದಾರೆ. ಪತ್ರಕರ್ತರ ಮೇಲಿನ ದಾಳಿಗೆ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
12 ಜಿಲ್ಲೆಗಳಲ್ಲಿ: ಕಳೆದ ವರ್ಷ ಕಣಿವೆ ರಾಜ್ಯದ 22 ಜಿಲ್ಲೆಗಳ ಪೈಕಿ 12ರಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಎನ್ಕೌಂಟರ್ಗಳು ನಡೆದಿದ್ದು, ಒಟ್ಟು 52 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!