15ರ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣವಾದ ಅನಾಮಿಕನ ಲವ್ ಲೆಟರ್
Team Udayavani, Jan 24, 2019, 6:48 AM IST
ಪಂಡರಾಪುರ, ಮಹಾರಾಷ್ಟ್ರ : ಅಪರಿಚಿತ ವ್ಯಕ್ತಿಯೋರ್ವ ಬರೆದ ಲವ್ ಲೆಟರ್ 15ರ ಹರೆಯದ ವಿದ್ಯಾರ್ಥಿನಿಯ ಜೀವಕ್ಕೇ ಎರವಾದ ಘಟನೆ ಇಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ಕೈಯಲ್ಲಿದ್ದ ಲವ್ ಲೆಟರ್ ಅನ್ನು ತನ್ನ ವಶಕ್ಕೆ ತೆಗೆದುಕೊಂಡ ತರಗತಿ ಶಿಕ್ಷಕ,ವಿದ್ಯಾರ್ಥಿನಿಗೆ ಯದ್ವಾತದ್ವಾ ಬೈದು, ನಿಂದಿಸಿ, ಗದರಿಸಿ ಆಕೆಯ ತಂದೆಯನ್ನು ಶಾಲೆಗೆ ಕರೆಸಿಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದ ಬಾಲಕಿಯು ಆತ್ಮಹತ್ಯೆಗೆ ಶರಣಾಗಲು ಕಾರಣವಾಯಿತೆನ್ನಲಾಗಿದೆ.
‘ಲವ್ ಲೆಟರ್ ಬರೆದವ ಯಾರೆಂದು ನನಗೆ ಗೊತ್ತಿಲ್ಲ;ನಾನು ಯಾವುದೇ ಹುಡುಗನನ್ನು ಲವ್ ಮಾಡುತ್ತಿಲ್ಲ’ ಎಂದು ಬಾಲಕಿ ಎಷ್ಟೇ ಹೇಳಿದರೂ ಸುಮ್ಮನಾಗದ ಶಿಕ್ಷಕ ಆಕೆಯನ್ನು ಗದರಿಸುವುದನ್ನು ನಿಲ್ಲಿಸಲೇ ಇಲ್ಲ. ಮೇಲಾಗಿ ಆಕೆಯ ತಂದೆಯನ್ನು ಒಡನೆಯೇ ಶಾಲೆಗೆ ಕರೆಸಿಕೊಂಡು ಅವರಲ್ಲೂ ‘ನಿಮ್ಮ ಮಗಳು ದಾರಿ ತಪ್ಪುತ್ತಿದ್ದಾಳೆ’ಎಂದು ದೂರಿದ.
ವಿದ್ಯಾರ್ಥಿನಿಯನ್ನು ಆಕೆಯ ತಂದೆ ಶಾಲೆಯಿಂದ ಮನೆಗೆ ಕರೆದೊಯ್ದ ಸಂಜೆಯೇ ಆಕೆ ತನ್ನ ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಳು.
ಇದನ್ನು ಅನುಸರಿಸಿ ವಿದ್ಯಾರ್ಥಿನಿ ವಾಸವಾಗಿರುವ ವಾಖರಿ ಗ್ರಾಮದ ಜನರು ಪಂಡರಾಪುರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಬಾಲಕಿಗೆ ಲವ್ ಲೆಟರ್ ಬರೆದು ಆಕೆಯ ಜೀವ ಬಲಿಪಡೆದ ಅನಾಮಿಕನನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಒತ್ತಾಯಿಸಿದರೆ.
ಲವ್ ಲೆಟರ್ ಬರೆದ ಅಪರಿಚಿತ, ಅನಾಮಿಕನನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಈಗ ಸವಾಲಾಗಿದೆ. ಅವರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು