ಸಂಸ್ಕೃತದಲ್ಲಿ ಪ್ರಾರ್ಥನೆ ವಿವಾದ: ಸಂವಿಧಾನ ಪೀಠಕ್ಕೆ ಪ್ರಕರಣ ವರ್ಗ
Team Udayavani, Jan 29, 2019, 12:30 AM IST
ಹೊಸದಿಲ್ಲಿ: ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತ ಮತ್ತು ಹಿಂದಿಯಲ್ಲಿ ಪ್ರಾರ್ಥನೆ ನಡೆಸುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ಸಂವಿ ಧಾನ ಪೀಠಕ್ಕೆ ವರ್ಗಾಯಿಸಿದೆ. ಈ ಅಭ್ಯಾಸವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ, ಇದನ್ನು ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ನ್ಯಾ| ಆರ್.ಎಫ್. ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠ ನಿರ್ಧರಿಸಿದೆ.
ಕೇಂದ್ರೀಯ ವಿದ್ಯಾಲಯದಲ್ಲಿ ಪ್ರತಿ ದಿನ ಬೆಳಗ್ಗೆ ಅಸತೋ ಮಾ ಸದ್ಗಮಯ ಎಂಬ ಶ್ಲೋಕವನ್ನು ಮಕ್ಕಳಿಂದ ಹೇಳಿಸ ಲಾಗುತ್ತದೆ. ಇದು ಹಿಂದೂ ಧರ್ಮವನ್ನು ಶಾಲೆಯಲ್ಲಿ ಪ್ರಚುರಪಡಿಸುತ್ತದೆ ಎಂದು ವಕೀಲ ವಿನಾಯಕ್ ಷಾ ದೂರು ಸಲ್ಲಿಸಿದ್ದರು. ಸೋಮವಾರ ವಿಚಾರಣೆ ವೇಳೆ ಅಸತೋ ಮಾ ಸದ್ಗಮಯ ಎಂಬುದನ್ನು ಉಪನಿಷತ್ತಿನಿಂದಲೇ ಪಡೆದಿದ್ದಲ್ಲವೇ ಎಂದು ನ್ಯಾ| ನಾರಿಮನ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ ತುಷಾರ್ ಮೆಹ್ತಾ, ಹೌದು. ಇದೇ ರೀತಿ ಪ್ರತಿ ಜಡ್ಜ್ಗಳ ಹಿಂಬದಿ ಬರೆದಿರುವ ಯತೋ ಧರ್ಮಸ್ ತತೋ ಜಯ ಎಂಬ ವಾಕ್ಯ ವನ್ನೂ ಭಗವದ್ಗೀತೆಯಿಂದಲೇ ಎರವಲು ಪಡೆಯಲಾಗಿದೆ ಎಂದರು. ಪ್ರಾರ್ಥನೆ ಸಂಸ್ಕೃತದಲ್ಲಿದೆ ಎಂದ ಮಾತ್ರಕ್ಕೆ ಅದನ್ನು ಧಾರ್ಮಿಕ ಎನ್ನಲಾಗದು. ಕ್ರಿಶ್ಚಿಯನ್ ಶಾಲೆಗಳಲ್ಲಿ ಹಾನೆಸ್ಟಿ ಈಸ್ ದಿ ಬೆಸ್ಟ್ ಪಾಲಿಸಿ ಎಂಬ ಪ್ರಾರ್ಥನೆಯನ್ನು ಹೇಳಿಸಲಾಗುತ್ತದೆ. ಅದೂ ಧಾರ್ಮಿಕ ಹೇಳಿಕೆ ಎಂದಾಗುತ್ತದೆಯೇ ಎಂದು ಮೆಹ್ತಾ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ