ಕೊಲೆಯಾಗಿ ಪತ್ತೆಯಾಗಿದ್ದು ಬಿಜೆಪಿ ನಾಯಕನಲ್ಲ, ಅವರ ಕೆಲಸದಾಳು!
Team Udayavani, Jan 29, 2019, 12:30 AM IST
ರತ್ಲಾಮ್: ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದಿದ್ದ ಹಿಮ್ಮತ್ ಪಾಟಿದಾರ್ ಎಂಬ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಗುರುತು ಸಿಗಲಾರದ ಆತನ ಮೃತದೇಹದ ಡಿಎನ್ಎ ಪರೀಕ್ಷಾ ವರದಿ ಲಭ್ಯವಾಗಿದ್ದು, ಮೃತಪಟ್ಟಾತ ಹಿಮ್ಮತ್ ಪಾಟಿದಾರ್ ಅಲ್ಲ, ಬದಲಿಗೆ ಹಿಮ್ಮತ್ ಅವರ ಕೆಲಸದಾಳು ಮದನ್ ಮಾಳವೀ ಯನದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ, ಹಿಮ್ಮತ್ ಇನ್ನೂ ಜೀವಂತವಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನೂ ನೀಡಿದ್ದಾರೆ. ತೀವ್ರ ಸಾಲದಲ್ಲಿ ಮುಳುಗಿದ್ದ ಪಾಟಿದಾರ್, ತನ್ನ ಹೆಸರಿನಲ್ಲಿರುವ ವಿಮೆ ಯೊಂದರ ಪರಿಹಾರ ಪಡೆಯಲು ತಾನು ಸತ್ತಿರುವಂತೆ ಬಿಂಬಿಸಲು ಯತ್ನಿಸಿದ್ದಾರೆ. ಇದಕ್ಕಾಗಿ, ತನ್ನ ಕೆಲಸದಾಳುವನ್ನು ಕೊಂದಿದ್ದಾರೆ ಎಂದು ಪೊಲೀಸರು ಅನುಮಾನಿಸಿದ್ದಾರೆ.
ಜ. 23ರಂದು ಹಿಮ್ಮತ್ ಅವರ ತಂದೆ ತಮ್ಮ ಮಗ ತಮ್ಮ ಗದ್ದೆಯಲ್ಲಿ ಸಾವಿಗೀ ಡಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀ ಸರಿಗೆ ಪ್ರಕರಣದ ಹಿಂದಿನ ದಿನ ಹಿಮ್ಮತ್ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಾಳವೀಯ ಕಾಣೆಯಾಗಿದ್ದು ತಿಳಿದು ಬಂದಿದ್ದರಿಂದ ಅನುಮಾನಗೊಂಡ ಪೊಲೀಸರು ಶವದ ಸ್ಯಾಂಪಲ್ಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ