ಮ.ಪ್ರ. ಶೇ.70ರಷ್ಟು ಉದ್ಯೋಗ ಸ್ಥಳೀಯರಿಗೇ ಮೀಸಲು
Team Udayavani, Feb 6, 2019, 12:30 AM IST
ಭೋಪಾಲ: ಮಧ್ಯಪ್ರದೇಶದಲ್ಲಿರುವ ಎಲ್ಲ ಉದ್ದಿಮೆಗಳಲ್ಲಿ ಶೇ.70ರಷ್ಟು ಸ್ಥಳೀಯರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಮಲ್ನಾಥ್ “ಚುನಾವಣೆ ವೇಳೆ ಬಿಡುಗಡೆ ಮಾಡಲಾಗಿರುವ ವಚನ ಪತ್ರದಂತೆ ಮಧ್ಯ ಪ್ರದೇಶದಾದ್ಯಂತ ಎಲ್ಲ ರೀತಿಯ ಕೈಗಾರಿಕೆಗಳಲ್ಲಿ ಶೇ. 70ರಷ್ಟು ಉದ್ಯೋಗವನ್ನು ಸ್ಥಳೀಯರಿಗೆ ನೀಡಬೇಕು ಎಂದು ಆದೇಶಿಸಲಾಗಿದೆ’ ಎಂದಿದ್ದಾರೆ. ಉತ್ತರಪ್ರದೇಶ, ಬಿಹಾರದಿಂದ ತೀವ್ರ ವಿರೋಧದ ನಡುವೆಯೂ ನಿರ್ಧಾರ ಘೋಷಿಸಲಾಗಿದೆ.
ಬಿಹಾರ ಮತ್ತು ಉ.ಪ್ರದೇಶದ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕಾರಣ, ಸ್ಥಳೀಯರಿಗೆ ಉದ್ಯೋಗ ದೊರಕುತ್ತಿಲ್ಲ ಎಂದು ಹೇಳಿ ಈ ಹಿಂದೆಯೇ ಕಮಲ್ನಾಥ್ ವಿವಾದ ಸೃಷ್ಟಿಸಿದ್ದರು. ಈಗ ವ್ಯಾಪಕ ವಿರೋಧದ ನಡುವೆಯೇ ಈ ನಿಯಮ ಜಾರಿಗೆ ತಂದಿದ್ದಾರೆ. ಹೊಸ ಕೈಗಾರಿಕಾ ನೀತಿಯ ಅನ್ವಯ ಈ ನಿಯಮ ಪ್ರಕಟಿಸಲಾಗಿದೆ. ಮಧ್ಯಪ್ರದೇಶ ಸರಕಾರ ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಉದ್ದಿಮೆಗಳು ಈ ನಿಯಮವನ್ನು ಪಾಲಿಸಬೇಕು. ಈ ಬಗ್ಗೆ ಚರ್ಚೆ ನಡೆಸಲು ಫೆ. 19ರಂದು ಸಿಎಂ ಕಮಲ್ನಾಥ್ ಉದ್ಯಮ ಕ್ಷೇತ್ರಗಳ ಮುಖ್ಯಸ್ಥರ ಜತೆಗೆ ಮಾತುಕತೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ