ತೆರಿಗೆದಾರರಿಗೆ ಇಲ್ಲ ನಗದು
Team Udayavani, Feb 8, 2019, 12:45 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಈ ಬಾರಿಯ ಬಜೆಟ್ನಲ್ಲಿ ಪ್ರಸ್ತಾವಿಸಿದಂತೆ ರೈತರಿಗೆ ವಾರ್ಷಿಕ 6 ಸಾವಿರ ರೂ. ನಗದು ಒದಗಿಸುವ ಯೋಜನೆಯು ಆದಾಯ ತೆರಿಗೆ ಪಾವತಿಸುವವರು, ಹಾಲಿ ಅಥವಾ ನಿವೃತ್ತ ಸರ್ಕಾರಿ ನೌಕರರು, ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರಿಗೆ ಅನ್ವಯಿಸುವುದಿಲ್ಲ. ಅಷ್ಟೇ ಅಲ್ಲ, ವೈದ್ಯರು, ಇಂಜಿನಿಯರ್, ವಕೀಲರು, ಚಾರ್ಟರ್ಡ್ ಅಕೌಂಟಂಟ್ ಸೇರಿದಂತೆ ಹಲವು ವೃತ್ತಿಪರರಿಗೆ ಹಾಗೂ ಅವರ ಕುಟುಂಬದವರಿಗೆ ಇದು ಲಭ್ಯವಾಗುವುದಿಲ್ಲ. ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮಾರ್ಗಸೂಚಿಗಳಲ್ಲಿ ಹೀಗೆ ಸ್ಪಷ್ಟಪಡಿಸಲಾಗಿದೆ.
ಪತಿ, ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳಿರುವ ಕುಟುಂಬವನ್ನು ಈ ಯೋಜನೆ ಅಡಿಯಲ್ಲಿ ಕುಟುಂಬ ಎಂದು ಪರಿಗಣಿಸಲಾಗುತ್ತದೆ. ಎರಡು ಹೆಕ್ಟೇರ್ಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದೆ. ಮೊದಲ ಕಂತು ಮಾರ್ಚ್ 31ರಂದು ಬಿಡುಗಡೆಯಾಗಲಿದ್ದು, ಎರಡನೇ ಕಂತು ಪಡೆಯಲು ಆಧಾರ್ ನೀಡುವುದು ಕಡ್ಡಾಯವಾಗಿರಲಿದೆ. ಫಲಾನುಭವಿಗಳ ಅರ್ಹತೆಯನ್ನು ಅಳೆಯಲು ಸ್ವಯಂ ಘೋಷಣೆಯೇ ಮಾನದಂಡವಾಗಿರಲಿದ್ದು, ಸ್ವಯಂ ಘೋಷಣೆ ತಪ್ಪಾಗಿದ್ದರೆ ನೀಡಲಾದ ಹಣವನ್ನು ವಾಪಸ್ ಪಡೆಯಲಾಗುತ್ತದೆ.
ರಾಜ್ಯಗಳಿಗೆ ಪತ್ರ
ಈ ನಡುವೆ, ಕಿಸಾನ್ ಸಮ್ಮಾನ್ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಲು ಸಹಕಾರ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರು ವುದಾಗಿ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ತಿಳಿಸಿದ್ದಾರೆ. ಯೋಜನೆಯನ್ನು ಸಮಯಕ್ಕೆ ಸರಿಯಾಗಿ ಜಾರಿ ಮಾಡಬೇಕೆಂದರೆ, ರಾಜ್ಯಮಟ್ಟದ ಆಡಳಿತ ಯಂತ್ರದಿಂದ ಗ್ರಾಮೀಣ ಮಟ್ಟ ದವರೆಗೆ ಎಲ್ಲರ ಒಳಗೊಳ್ಳುವಿಕೆ ಅಗತ್ಯವಾಗಿರುತ್ತದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ