ಗುಜರಾತ್‌ನಲ್ಲಿ ಹುಲಿ ಪತ್ತೆ!


Team Udayavani, Feb 11, 2019, 12:30 AM IST

tiger.jpg

ಅಹಮದಾಬಾದ್‌: ಅಧಿಕ ಸಂಖ್ಯೆಯಲ್ಲಿ ಸಿಂಹಗಳನ್ನು ಹೊಂದಿರುವ ಗುಜರಾತ್‌ನಲ್ಲಿ 25 ವರ್ಷಗಳ ನಂತರ ಹುಲಿ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿದೆ. ದಟ್ಟ ಕಾನನದಿಂದ ತುಂಬಿರುವ ಡಂಗ್‌ ಅರಣ್ಯ ಪ್ರದೇಶದ ರಸ್ತೆಯೊಂದನ್ನು ಹುಲಿಯೊಂದು ದಾಟುತ್ತಿರುವ ದೃಶ್ಯಗಳನ್ನು ಮಹೇಶ್‌ ಮಹೇರಾ ಎಂಬ ಶಿಕ್ಷಕರೊಬ್ಬರು ತಮ್ಮ ಮೊಬೈಲಿನಿಂದ ಸೆರೆ ಹಿಡಿದಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹೊತ್ತಿಸಿವೆ. ಸಂಪೂರ್ಣವಾಗಿ ನಶಿಸಿ ಹೋಗಿದೆಯೆಂದೇ ತೀರ್ಮಾನಿಸಲಾಗಿದ್ದ ಗುಜರಾತ್‌ನಲ್ಲಿ ಹುಲಿ ಸಂತತಿ ಮತ್ತೆ ಕುಡಿಯೊಡೆದಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿದೆ.

ಹುಲಿಯೊಂದು ಈ ಪ್ರದೇಶದಲ್ಲಿ ಅಡ್ಡಾಡುತ್ತಿದೆಯೆಂದು ಕಳೆದ ವರ್ಷದ ಮಧ್ಯಭಾಗದಲ್ಲೇ ಗುಲ್ಲೆದ್ದಿತ್ತು. ಆದರೆ, ಇದನ್ನು ಖುದ್ದು ಅರಣ್ಯ ಇಲಾಖೆಯೇ ನಂಬಿರಲಿಲ್ಲ. ಅಷ್ಟರ ಮಟ್ಟಿಗೆ, ಗುಜರಾತ್‌ನಲ್ಲಿ ಹುಲಿ ಸಂತತಿ ಇಲ್ಲ ಎಂಬ ನಿರ್ಧಾರಕ್ಕೆ ಇಲಾಖೆಯೂ ಬಂದಿತ್ತು. ಆದರೀಗ, ಶಿಕ್ಷಕ ಮಹೇಶ್‌ ಮೊಬೈಲ್‌ ಚಿತ್ರಗಳು ಹುಲಿ ಬಗೆಗಿನ ಮಾಹಿತಿಗಳಿಗೆ ಪುಷ್ಟಿ ನೀಡಿವೆ.

ಅಸಲಿಗೆ, ಮೊದಲಿನಿಂದಲೂ ಡಂಗ್‌ ಅರಣ್ಯ ಪ್ರದೇಶವೇ ಹುಲಿಗಳ ಆವಾಸ ಸ್ಥಾನ. ಹಾಗಿದ್ದರೂ ಅಲ್ಲಿ 80-90ರ ದಶಕದಲ್ಲೇ ಬೆರಳೆಣಿಕೆಯಷ್ಟು ಹುಲಿಗಳಿದ್ದವು. 1985ರಲ್ಲಿ ರಸ್ತೆ ಅಪಘಾತದಲ್ಲಿ ಹುಲಿಯೊಂದು ಪ್ರಾಣ ತೆತ್ತಿತ್ತು. ಇನ್ನು, 1993-94ರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು ಬಿಟ್ಟರೆ, ಅಲ್ಲಿಂದ ಇಲ್ಲಿಯವರೆಗೂ ಒಂದೇ ಒಂದು ಹುಲಿಯೂ ಜನರಿಗೆ ಕಾಣಿಸಿಕೊಂಡ ಉದಾಹರಣೆಯಿರಲಿಲ್ಲ.

ಹುಲಿ ಇರುವಿಕೆಗೆ ಸಾಕ್ಷ್ಯ ಸಿಕ್ಕಿದೆ. ಮತ್ತಷ್ಟು ನಿಖರತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದೇವೆ. ಹುಲಿಯ ಇರುವಿಕೆ ಖಾತ್ರಿ ಆದರೆ, ಅದರ ಸಂರಕ್ಷಣೆ, ವಂಶಾವಭಿವೃದ್ಧಿಗೆ ಹೊಸ ಯೋಜನೆ ಹಮ್ಮಿಕೊಳ್ಳುತ್ತೇವೆ.
 – ಅಕ್ಷಯ್‌ ಸಕ್ಸೇನಾ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.