ಗುಜರಾತ್‌ನಲ್ಲಿ ಹುಲಿ ಪತ್ತೆ!


Team Udayavani, Feb 11, 2019, 12:30 AM IST

tiger.jpg

ಅಹಮದಾಬಾದ್‌: ಅಧಿಕ ಸಂಖ್ಯೆಯಲ್ಲಿ ಸಿಂಹಗಳನ್ನು ಹೊಂದಿರುವ ಗುಜರಾತ್‌ನಲ್ಲಿ 25 ವರ್ಷಗಳ ನಂತರ ಹುಲಿ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿದೆ. ದಟ್ಟ ಕಾನನದಿಂದ ತುಂಬಿರುವ ಡಂಗ್‌ ಅರಣ್ಯ ಪ್ರದೇಶದ ರಸ್ತೆಯೊಂದನ್ನು ಹುಲಿಯೊಂದು ದಾಟುತ್ತಿರುವ ದೃಶ್ಯಗಳನ್ನು ಮಹೇಶ್‌ ಮಹೇರಾ ಎಂಬ ಶಿಕ್ಷಕರೊಬ್ಬರು ತಮ್ಮ ಮೊಬೈಲಿನಿಂದ ಸೆರೆ ಹಿಡಿದಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹೊತ್ತಿಸಿವೆ. ಸಂಪೂರ್ಣವಾಗಿ ನಶಿಸಿ ಹೋಗಿದೆಯೆಂದೇ ತೀರ್ಮಾನಿಸಲಾಗಿದ್ದ ಗುಜರಾತ್‌ನಲ್ಲಿ ಹುಲಿ ಸಂತತಿ ಮತ್ತೆ ಕುಡಿಯೊಡೆದಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿದೆ.

ಹುಲಿಯೊಂದು ಈ ಪ್ರದೇಶದಲ್ಲಿ ಅಡ್ಡಾಡುತ್ತಿದೆಯೆಂದು ಕಳೆದ ವರ್ಷದ ಮಧ್ಯಭಾಗದಲ್ಲೇ ಗುಲ್ಲೆದ್ದಿತ್ತು. ಆದರೆ, ಇದನ್ನು ಖುದ್ದು ಅರಣ್ಯ ಇಲಾಖೆಯೇ ನಂಬಿರಲಿಲ್ಲ. ಅಷ್ಟರ ಮಟ್ಟಿಗೆ, ಗುಜರಾತ್‌ನಲ್ಲಿ ಹುಲಿ ಸಂತತಿ ಇಲ್ಲ ಎಂಬ ನಿರ್ಧಾರಕ್ಕೆ ಇಲಾಖೆಯೂ ಬಂದಿತ್ತು. ಆದರೀಗ, ಶಿಕ್ಷಕ ಮಹೇಶ್‌ ಮೊಬೈಲ್‌ ಚಿತ್ರಗಳು ಹುಲಿ ಬಗೆಗಿನ ಮಾಹಿತಿಗಳಿಗೆ ಪುಷ್ಟಿ ನೀಡಿವೆ.

ಅಸಲಿಗೆ, ಮೊದಲಿನಿಂದಲೂ ಡಂಗ್‌ ಅರಣ್ಯ ಪ್ರದೇಶವೇ ಹುಲಿಗಳ ಆವಾಸ ಸ್ಥಾನ. ಹಾಗಿದ್ದರೂ ಅಲ್ಲಿ 80-90ರ ದಶಕದಲ್ಲೇ ಬೆರಳೆಣಿಕೆಯಷ್ಟು ಹುಲಿಗಳಿದ್ದವು. 1985ರಲ್ಲಿ ರಸ್ತೆ ಅಪಘಾತದಲ್ಲಿ ಹುಲಿಯೊಂದು ಪ್ರಾಣ ತೆತ್ತಿತ್ತು. ಇನ್ನು, 1993-94ರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು ಬಿಟ್ಟರೆ, ಅಲ್ಲಿಂದ ಇಲ್ಲಿಯವರೆಗೂ ಒಂದೇ ಒಂದು ಹುಲಿಯೂ ಜನರಿಗೆ ಕಾಣಿಸಿಕೊಂಡ ಉದಾಹರಣೆಯಿರಲಿಲ್ಲ.

ಹುಲಿ ಇರುವಿಕೆಗೆ ಸಾಕ್ಷ್ಯ ಸಿಕ್ಕಿದೆ. ಮತ್ತಷ್ಟು ನಿಖರತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದೇವೆ. ಹುಲಿಯ ಇರುವಿಕೆ ಖಾತ್ರಿ ಆದರೆ, ಅದರ ಸಂರಕ್ಷಣೆ, ವಂಶಾವಭಿವೃದ್ಧಿಗೆ ಹೊಸ ಯೋಜನೆ ಹಮ್ಮಿಕೊಳ್ಳುತ್ತೇವೆ.
 – ಅಕ್ಷಯ್‌ ಸಕ್ಸೇನಾ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.