ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಹೇಗೆ ಪಡೆಯುವುದೆಂದು ಗೊತ್ತು: ನಾಯ್ಡು
Team Udayavani, Feb 11, 2019, 5:28 AM IST
ಹೊಸದಿಲ್ಲಿ : ‘ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಈಡೇರಿಸದಿದ್ದರೆ ಅದನ್ನು ಹೇಗೆ ಈಡೇರಿಸಿಕೊಳ್ಳಬೇಕು ಎಂಬುದು ನಮಗೆ ಗೊತ್ತು’ ಎಂದು ಆಂಧ್ರ ಪ್ರದೇಶ ಸಿಎಂ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಮೋದಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
‘ರಾಜ್ಯಕ್ಕೆ ವಿಶೇಷ ಸ್ಥಾನಮಾನ ಪಡೆಯುವ ವಿಷಯವು ಈಗ ಆಂಧ್ರ ಪ್ರದೇಶದ ಜನರ ಸ್ವಾಭಿಮಾನದ ಪ್ರಶ್ನೆಯಾಗಿದೆ. ಪ್ರಧಾನಿ ಮೋದಿ ಅವರು ಒಬ್ಬ ವ್ಯಕ್ತಿಯನ್ನು ನಿಂದಿಸಿ ದಾಳಿ ಮಾಡುವುದನ್ನು ನಿಲ್ಲಿಸಬೇಕು’ ಎಂದು ನಾಯ್ಡು ಗುಡುಗಿದರು.
ಪ್ರಧಾನಿ ಮೋದಿ ಅವರು ನಿನ್ನೆ ಭಾನುವಾರ ಆಂಧ್ರಕ್ಕೆ ಭೇಟಿ ನೀಡಿರುವುದನ್ನು ತೀವ್ರವಾಗಿ ಟೀಕಿಸಿದ ನಾಯ್ಡು, ‘ನಾವಿಲ್ಲಿಗೆ ಬಂದಿರುವುದು ಕೇಂದ್ರ ಸರಕಾರವನ್ನು ಪ್ರತಿಭಟಿಸಲು; ನಿನ್ನೆ ಪ್ರಧಾನಿಯವರು ಆಂಧ್ರ ಪ್ರದೇಶದ ಗುಂಟೂರಿಗೆ ಧರಣಿ ಸತ್ಯಾಗ್ರಹಕ್ಕೆ ಒಂದು ದಿನದ ಮೊದಲೇ ಭೇಟಿ ನೀಡಿದರು. ಹಾಗೆ ಮಾಡುವುದರ ಅಗತ್ಯವೇನಿತ್ತು ಎಂದು ನಾನು ಕೇಳುತ್ತೇನೆ’ ಎಂದು ನಾಯ್ಡು ಹೇಳಿದರು.
ಇದಕ್ಕೆ ಮೊದಲು ಚಂದ್ರಬಾಬು ನಾಯ್ಡು ಅವರು ಆಂಧ್ರ ಭವನದಲ್ಲಿ , ತಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಕೇಂದ್ರವನ್ನು ಆಗ್ರಹಿಸಲು ದಿನಪೂರ್ತಿ ನಿರಶನ ಸತ್ಯಾಗ್ರಹ ನಡೆಸಿದ್ದರು. ಇದಕ್ಕೆ ಮೊದಲು ನಾಯ್ಡು ಅವರು ರಾಜಘಾಟ್ನಲ್ಲಿ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ