ಉತ್ತರ ಪ್ರದೇಶ: ನೂರಕ್ಕೂ ಅಧಿಕ ದನಗಳ ಸಾವು; ತನಿಖೆಗೆ ಆದೇಶ
Team Udayavani, Feb 11, 2019, 6:08 AM IST
ಮುಜಫರನಗರ : ಉತ್ತರ ಪ್ರದೇಶದ ಮುಜಫರನಗರ ಜಿಲ್ಲೆಯ ಗ್ರಾಮಗಳಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಅಧಿಕ ಗೋವುಗಳು ಸಾವಪ್ಪಿದ್ದು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಯುತ್ತಿದ್ದ ದನಗಳು ಸತ್ತಿರುವುದರಿಂದ ಇವು ವಿಷಕಾರಿ ಹುಲ್ಲನ್ನು ತಿಂದಿರಬಹುದು ಅಥವಾ ಮಲಿನಯುಕ್ತ ನೀರನ್ನು ಕುಡಿದಿರಬಹುದು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಹೇಳಿದ್ದಾರೆ.
ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಕಂದಾಯ ಇಲಾಖೆಯ ಒಂದು ತಂಡ ಮತ್ತು ಪಶು ವೈದ್ಯರು ಸ್ಥಳಕ್ಕೆ ಹೋಗಿದ್ದು ದನಗಳ ಸಾವಿಗೆ ಕಾರಣವೇನೆಂಬುದನ್ನು ಕಂಡುಕೊಳ್ಳಲಿದ್ದಾರೆ. ಈ ದನಗಳನ್ನು ಆಸರೆ ಕೇಂದ್ರದಿಂದ ಗೋಮಾಳಕ್ಕೆ ತರಲಾಗಿತ್ತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್