ಅಲ್ಪಸಂಖ್ಯಾಕ ಪದದ ಮರು ವ್ಯಾಖ್ಯಾನ: ಆಯೋಗಕ್ಕೆ ಸುಪ್ರಿಂ ಸೂಚನೆ
Team Udayavani, Feb 11, 2019, 6:23 AM IST
ಹೊಸದಿಲ್ಲಿ : ಸಮುದಾಯವೊಂದರ ರಾಜ್ಯವಾರು ಜನಸಂಖ್ಯೆಯನ್ನು ಲೆಕ್ಕಿಸಿಕೊಂಡು, “ಅಲ್ಪಸಂಖ್ಯಾಕ’ ಪದದ ಮರು ವ್ಯಾಖ್ಯಾನಕ್ಕೆ ಮಾರ್ಗದರ್ಶಿ ಸೂತ್ರ ರೂಪಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿ ಮೂರು ತಿಂಗಳ ಒಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಇಂದು ಸೋಮವಾರ ರಾಷ್ಟ್ರೀಯ ಅಲ್ಪಸಂಖ್ಯಾಕ ಆಯೋಗಕ್ಕೆ (ಎನ್ಸಿಎಂ ಗೆ) ಸೂಚನೆ ನೀಡಿದೆ.
ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೋಯ್ ನೇತೃತ್ವದ ಪೀಠವು ಈ ವಿಷಯದಲ್ಲಿ, “ಅರ್ಜಿದಾರರಾಗಿರುವ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಅಲ್ಪಸಂಖ್ಯಾಕ ಆಯೋಗಕ್ಕೆ ಮರು ಅರ್ಜಿ ಸಲ್ಲಿಸಬೇಕು; ಮತ್ತು ಇಂದು ಸೋಮವಾರದಿಂದ ಮೂರು ತಿಂಗಳ ಒಳಗೆ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಹೇಳಿತು.
“ರಾಷ್ಟ್ರವ್ಯಾಪಿ ಜನಸಂಖ್ಯಾ ಅಂಕಿಅಂಶಗಳಿಗೆ ಬದಲಾಗಿ ರಾಜ್ಯದಲ್ಲಿನ ಒಂದು ನಿರ್ದಿಷ್ಟ ಸಮುದಾಯದ ಜನಸಂಖ್ಯೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಲ್ಪಸಂಖ್ಯಾಕ ಪದವನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯವಿದೆ’ ಎಂದು ಉಪಾಧ್ಯಾಯ ಅವರು ತಮ್ಮ ಅರ್ಜಿಯಲ್ಲಿ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ