ಗೋ ರಕ್ಷಣೆ ಹೆಸರಲ್ಲಿ ಮುಸ್ಲಿಮರ ಹತ್ಯೆ: ಮೆಹಬೂಬ ಮುಫ್ತಿ ಆರೋಪ
Team Udayavani, Feb 11, 2019, 6:38 AM IST
ಜಮ್ಮು : ‘ದೇಶದಲ್ಲಿ ಗೋ ರಕ್ಷಣೆಯ ನೆಪದಲ್ಲಿ ಇಂದಿಗೂ ಮುಸ್ಲಿಮರನ್ನು ಕೊಲ್ಲಲಾಗುತ್ತಿದೆ’ ಎಂದು ಆರೋಪಿಸಿರುವ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಅವರು ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಮೋದಿ ಸರಕಾರವನ್ನು ಟೀಕಿಸುವುದನ್ನು ಮುಂದುವರಿಸಿದ್ದಾರೆ.
ಕೇಂದ್ರದಲ್ಲಿನ ಆಳುವ ಬಿಜೆಪಿ ಸರಕಾರದ ಹಿಂದುತ್ವದ ರಾಜಕಾರಣವನ್ನು ತೀವ್ರವಾಗಿ ಟೀಕಿಸಿರುವ ಮುಫ್ತಿ, ಬಿಜೆಪಿ ಸರಕಾರ ಹಳೇ ನಗರಗಳು ಮತ್ತು ಸ್ಮಾರಕಗಳ ಹೆಸರನ್ನು ಬದಲಿಸುವುದರಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಮಾತ್ರವೇ ಆಸಕ್ತವಾಗಿದೆ ಎಂದು ಟೀಕಿಸಿದರು.
ಕರ್ತಾರ್ಪುರ್ ಕಾರಿಡಾರ್ ವಿಷಯದಲ್ಲಿ ಸದ್ಭಾವನೆ ತೋರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ಅಪಾರ ಪ್ರಶಂಸೆ ವ್ಯಕ್ತಪಡಿಸಿದ ಮೆಹಬೂಬ, ಪಾಕಿಸ್ಥಾನದಲ್ಲಿ ಅಲ್ಲಿನ ಸರಕಾರ ಹಿಂದೂ ದೇವಾಲಯಗಳನ್ನು ರಕ್ಷಿಸುವ ಕಾಯಿದೆಯನ್ನು ರೂಪಿಸಿದೆ. ಹಾಗೆಯೇ ಒಂದು ಮೀಸಲು ಅರಣ್ಯಕ್ಕೆ ಮತ್ತು ವಿವಿಗೆ ಗುರು ನಾನಕ್ ಜೀ ಅವರ ಹೆಸರನ್ನು ಇರಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?