ವಿವಿಯಲ್ಲಿ ಮೀಸಲಾತಿ: ಅಧ್ಯಾದೇಶಕ್ಕೆ ನಿರ್ಧಾರ?
Team Udayavani, Feb 12, 2019, 12:30 AM IST
ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಸಿಬಂದಿ ನೇಮಕಾತಿಯಲ್ಲಿ ಮೀಸಲಾತಿ ವಿಧಾನದ ಬಗ್ಗೆ ಕೇಂದ್ರ ಸರಕಾರದ ಮರುಪರಿಶೀಲನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದರೆ, ಇದಕ್ಕೆ ಸಂಬಂಧಿಸಿದಂತೆ ಅಧ್ಯದೇಶವನ್ನು ಹೊರತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಉತ್ತರಿಸಿದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾಬ್ಡೇಕರ್ ಈ ಬಗ್ಗೆ ವಿವರಿಸಿದ್ದಾರೆ. ಈಗಾಗಲೇ ವಿಶೇಷ ವಿನಾಯಿತಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದಿದ್ದಾರೆ. ವಿವಿಧ ಸಮುದಾಯಗಳಿಗೆ ಮೀಸಲು ಆಧಾರದಲ್ಲಿ ಹುದ್ದೆ ಭರ್ತಿ ಮಾಡಲು ಒಂದು ವಿಭಾಗವನ್ನು ಘಟಕ ಎಂದು ಪರಿಗಣಿಸಬೇಕು ಎಂದು ಈ ಹಿಂದೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ನಿರ್ಧರಿಸಿತ್ತು. ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ