5 ಕೋಟಿ ಮನೆಗಳಲ್ಲಿ ಹಾರಾಡಲಿದೆ ಬಿ.ಜೆ.ಪಿ. ಬಾವುಟ
Team Udayavani, Feb 12, 2019, 5:17 AM IST
ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪಕ್ಷದ ಹೊಸ ಘೋಷ ವಾಕ್ಯವನ್ನು ಬಿಡುಗಡೆಗೊಳಿಸಿ ಚುನಾವಣಾ ಕಣಕ್ಕೆ ಅಧಿಕೃತವಾಗಿ ಬಿ.ಜೆ.ಪಿ. ಚಾಲನೆ ನೀಡಿತ್ತು. ಇದೀಗ ಕಮಲ ಪಕ್ಷವು ಅದರ ಮುಂದುವರಿದ ಭಾಗವಾಗಿ ಮಂಗಳವಾರದಂದು ‘ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ ನೀಡಿದೆ. ಸರಿಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ದೇಶಾದ್ಯಂತ ಸುಮಾರು 5 ಕೋಟಿ ಮನೆಗಳಲ್ಲಿ ಪಕ್ಷದ ಬಾವುಟವನ್ನು ಹಾರಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ..
ಭಾ.ಜ.ಪ.ದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿರುವ ತನ್ನ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಮತ್ತು ಸ್ಟಿಕ್ಕರ್ ಅನ್ನು ಅಂಟಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಡಿಟೋರಿಯಂನಲ್ಲಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ, ಈ ಸಂದರ್ಭದಲ್ಲಿ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
12 फरवरी से शुरू हो रहे ‘मेरा परिवार भाजपा परिवार’ अभियान के अंतर्गत अपने घर पर भाजपा का झंडा और स्टीकर लगाकर, 2019 में फिर से भाजपा सरकार बनाने के लिए मोदी जी के साथ मजबूती से खड़े हों। #MeraParivarBhajapaParivar हैशटैग के साथ अपनी फोटो साझा करें : श्री अमित शाह pic.twitter.com/FFSWV2PIYJ
— BJP (@BJP4India) February 11, 2019
ನರೇಂದ್ರ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪಕ್ಷದ ಬಾವುಟಗಳನ್ನು ಹಾರಿಸಿ ಬಳಿಕ ಅವುಗಳ ಫೊಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅಮಿತ್ ಶಾ ಅವರು ಮನವಿ ಮಾಡಿಕೊಂಡಿರುವ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಪಕ್ಷ ಬಿಡುಗಡೆಗೊಳಿಸಿದೆ. ಈ ರಾಷ್ಟ್ರವ್ಯಾಪಿ ಅಭಿಯಾನವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು ಮಾರ್ಚ್ 2ರಂದು ಅಂತ್ಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ