5 ಕೋಟಿ ಮನೆಗಳಲ್ಲಿ ಹಾರಾಡಲಿದೆ ಬಿ.ಜೆ.ಪಿ. ಬಾವುಟ
Team Udayavani, Feb 12, 2019, 5:17 AM IST
ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪಕ್ಷದ ಹೊಸ ಘೋಷ ವಾಕ್ಯವನ್ನು ಬಿಡುಗಡೆಗೊಳಿಸಿ ಚುನಾವಣಾ ಕಣಕ್ಕೆ ಅಧಿಕೃತವಾಗಿ ಬಿ.ಜೆ.ಪಿ. ಚಾಲನೆ ನೀಡಿತ್ತು. ಇದೀಗ ಕಮಲ ಪಕ್ಷವು ಅದರ ಮುಂದುವರಿದ ಭಾಗವಾಗಿ ಮಂಗಳವಾರದಂದು ‘ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ ನೀಡಿದೆ. ಸರಿಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ದೇಶಾದ್ಯಂತ ಸುಮಾರು 5 ಕೋಟಿ ಮನೆಗಳಲ್ಲಿ ಪಕ್ಷದ ಬಾವುಟವನ್ನು ಹಾರಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ..
ಭಾ.ಜ.ಪ.ದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿರುವ ತನ್ನ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಮತ್ತು ಸ್ಟಿಕ್ಕರ್ ಅನ್ನು ಅಂಟಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಡಿಟೋರಿಯಂನಲ್ಲಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ, ಈ ಸಂದರ್ಭದಲ್ಲಿ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
12 फरवरी से शुरू हो रहे ‘मेरा परिवार भाजपा परिवार’ अभियान के अंतर्गत अपने घर पर भाजपा का झंडा और स्टीकर लगाकर, 2019 में फिर से भाजपा सरकार बनाने के लिए मोदी जी के साथ मजबूती से खड़े हों। #MeraParivarBhajapaParivar हैशटैग के साथ अपनी फोटो साझा करें : श्री अमित शाह pic.twitter.com/FFSWV2PIYJ
— BJP (@BJP4India) February 11, 2019
ನರೇಂದ್ರ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪಕ್ಷದ ಬಾವುಟಗಳನ್ನು ಹಾರಿಸಿ ಬಳಿಕ ಅವುಗಳ ಫೊಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅಮಿತ್ ಶಾ ಅವರು ಮನವಿ ಮಾಡಿಕೊಂಡಿರುವ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಪಕ್ಷ ಬಿಡುಗಡೆಗೊಳಿಸಿದೆ. ಈ ರಾಷ್ಟ್ರವ್ಯಾಪಿ ಅಭಿಯಾನವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು ಮಾರ್ಚ್ 2ರಂದು ಅಂತ್ಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ