ದಿಲ್ಲಿ ಹೊಟೇಲ್ ಅಗ್ನಿ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
Team Udayavani, Feb 12, 2019, 6:11 AM IST
ಹೊಸದಿಲ್ಲಿ : ಮಧ್ಯ ದಿಲ್ಲಿಯ ಕರೋಲ್ ಬಾಗ್ ನಲ್ಲಿ ಇಂದು ಮಂಗಳವಾರ 17 ಜನರನ್ನು ಬಲಿ ಪಡೆದಿರುವ ಹೊಟೇಲ್ ಅಗ್ನಿ ದುರಂತದ ಬಗ್ಗೆ ದಿಲ್ಲಿ ಸರಕಾರ ಮ್ಯಾಜಿಸ್ಟ್ರೇಟರ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಅಗ್ನಿ ದುರಂತದ ಸುದ್ದಿ ತಿಳಿದೊಡನೆಯೇ ನಸುಕಿನ ವೇಳೆ ಅರ್ಪಿತ್ ಪ್ಯಾಲೇಸ್ ಹೊಟೇಲ್ಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ ಸಚಿವ ಜೈನ್ ಅವರು, ದಿಲ್ಲಿಯಲ್ಲಿನ ಐದು ಮತ್ತು ಐದಕ್ಕಿಂತ ಹೆಚ್ಚು ಮಹಡಿಗಳ ಕಟ್ಟಡಗಳಲ್ಲಿನ ಅಗ್ನಿ ಸುರಕ್ಷೆ ಮತ್ತು ಮುಂಜಾಗ್ರತೆ ವ್ಯವಸ್ಥೆಯ ಬಗ್ಗೆ ತಪಾಸಣೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ತಾನು ಅಗ್ನಿ ಶಾಮಕ ದಳವನ್ನು ಕೇಳಿಕೊಂಡಿರುವುದಾಗಿ ತಿಳಿಸಿದರು.
17 ಜನರನ್ನು ಬಲಿ ಪಡೆದಿರುವ ಅಗ್ನಿ ದುರಂತ ಸಂಭವಿಸಿರುವ ದಿಲ್ಲಿ ಹೊಟೇಲ್ನಲ್ಲಿ ಕೆಲವೊಂದು ಲೋಪಗಳು ಇದ್ದುದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ; ತಪ್ಪುಗಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜೈನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ