ತಮ್ಮ 3.2 ಕೋಟಿ ರೂ. ಜೀವ ವಿಮೆಗಾಗಿ ಮತ್ತಿಬ್ಬರನ್ನು ಜೀವಂತ ಸುಟ್ಟರು!
Team Udayavani, Feb 12, 2019, 8:58 AM IST
ನವದೆಹಲಿ: ತನ್ನ ಹೆಸರಿನಲ್ಲಿದ್ದ 3.2 ಕೋಟಿ ರೂಪಾಯಿ ಇನ್ಸೂರೆನ್ಸ್ ಹಣ ಪಡೆಯುವ ನಿಟ್ಟಿನಲ್ಲಿ ಇಬ್ಬರನ್ನು ಕಾರಿನೊಳಗೆ ಕೂಡಿ ಹಾಕಿ ಜೀವಂತವಾಗಿ ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಮಥುರಾದಲ್ಲಿ ನಡೆದಿದೆ.
ಸಿಕ್ಕಿಬಿದ್ದಿದ್ದು ಹೇಗೆ?
ಕುನ್ವಾರ್ ಪಾಲ್(40ವರ್ಷ) ಹಾಗೂ ಲೇಖಾನ್ (38ವರ್ಷ) ಸೇರಿದಂತೆ ಇಬ್ಬರ ಸುಟ್ಟುಹೋದ ಶವ ಕಾರಿನೊಳಗೆ ಪತ್ತೆಯಾಗಿತ್ತು. ಈ ಇಬ್ಬರ ನಿಗೂಢ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.
ಲಾಲಾರಾಮ್ (35) ಮತ್ತು ರೋಹ್ಟಾಶ್ (34) ಇಬ್ಬರು ಸೇರಿ ತಾವು ಸತ್ತಿರುವುದಾಗಿ ನಂಬಿಸಿ 3.2 ಕೋಟಿ ರೂಪಾಯಿ ಜೀವ ವಿಮೆಯನ್ನು ಪಡೆಯಲು ಮತ್ತಿಬ್ಬರು ಗೆಳೆಯರನ್ನು ಕಾರಿನೊಳಗೆ ಜೀವಂತವಾಗಿ ಸುಟ್ಟು ಬಿಟ್ಟಿದ್ದರು.
ಮೃತದೇಹದ ಗುರುತು ಪತ್ತೆಯಾಗದಂತೆ ಮಾಡಿ ಜೀವ ವಿಮೆ ಪಡೆಯಬೇಕೆಂದು ಲಾಲಾರಾಮ್ ಮತ್ತು ರೋಹ್ಟಾಶ್ ಸಂಚು ರೂಪಿಸಿದ್ದರು. ಕೊನೆಗೂ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ