ಹೆಸರಿನ ಜತೆಗೆ ಪ್ರಶಸ್ತಿ ಬಳಕೆ ಸಲ್ಲ
Team Udayavani, Feb 13, 2019, 12:30 AM IST
ಹೊಸದಿಲ್ಲಿ: ಪದ್ಮ ಪ್ರಶಸ್ತಿ, ಭಾರತ ರತ್ನಗಳನ್ನು ಹೆಸರಿನ ಜತೆಗೆ ಬಳಕೆ ಮಾಡುವಂತಿಲ್ಲ. ಒಂದು ವೇಳೆ ಅದರ ದುರುಪಯೋಗ ಕಂಡು ಬಂದರೆ ಗೌರವವನ್ನು ವಾಪಸ್ ಪಡೆಯಲಾಗುತ್ತದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಲೋಕ ಸಭೆಗೆ ಮಾಹಿತಿ ನೀಡಿದ ಸಚಿವ ಹಂಸರಾಜ ಅಹಿರ್ ಸಂವಿಧಾನದ 18(1)ನೇ ವಿಧಿ ಪ್ರಕಾರ ಹೆಸರಿನ ಜತೆಯಲ್ಲಿ ಭಾರತ ರತ್ನ, ಪದ್ಮ ಶ್ರೀ, ಪದ್ಮ ಭೂಷಣ, ಪದ್ಮವಿಭೂಷಣಗಳನ್ನು ಯಾವುದೇ ರೀತಿ ಬಳಕೆ ಮಾಡುವಂತಿಲ್ಲ. ಪ್ರಶಸ್ತಿಗೆ ಆಯ್ಕೆಯಾದವರಿಗೆಲ್ಲ ಮಾಹಿತಿ ನೀಡುವ ಸಂದರ್ಭದಲ್ಲಿ ಈ ನಿಯಮಗಳನ್ನು ಕಳುಹಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ, ಅಸ್ಸಾಮಿ ಗಾಯಕ ದಿ|ಭೂಪೇನ್ ಹಜಾರಿಕಾಗೆ ಮರಣೋತ್ತರವಾಗಿ ನೀಡಲಾಗಿರುವ “ಭಾರತ ರತ್ನ’ ಗೌರವ ಒಪ್ಪಿಕೊಳ್ಳದಿರಲು ಪುತ್ರ ತೇಜ್ ಹಜಾರಿಕಾ ನಿರ್ಧರಿಸಿದ್ದಾರೆ. ಕೇಂದ್ರ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ (ತಿದ್ದುಪಡಿ) ವಿಧೇಯಕವನ್ನು ವಿರೋಧಿಸಿ ಈ ನಿರ್ಧಾರಕ್ಕೆ ಬರುವ ಚಿಂತನೆಯಲ್ಲಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ