NDA ರಫೇಲ್‌ ಅಗ್ಗ : CAG ವರದಿ ಲೋಕಸಭೆ, ರಾಜ್ಯಸಭೆಯಲ್ಲಿ  ಮಂಡನೆ


Team Udayavani, Feb 14, 2019, 12:30 AM IST

f-26.jpg

ಹೊಸದಿಲ್ಲಿ: ವಿವಾದ ಸೃಷ್ಟಿಸಿರುವ ರಫೇಲ್‌ ಡೀಲ್‌ಗೆ ಸಂಬಂಧಿಸಿದ ಮಹಾಲೇಖಪಾಲರ (ಸಿಎಜಿ) ವರದಿಯನ್ನು ಸಂಸತ್‌ನಲ್ಲಿ ಬುಧವಾರ ಮಂಡಿಸಲಾಗಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಸಹಿ ಹಾಕಿ ರಫೇಲ್‌ ಒಪ್ಪಂದವು 2007ರಲ್ಲಿ ಯುಪಿಎ ಮಾತುಕತೆ ನಡೆಸುತ್ತಿದ್ದಾ ಗಿನ ದರಕ್ಕೆ ಹೋಲಿಸಿದರೆ ಶೇ. 2.86ರಷ್ಟು ಕಡಿಮೆ ಇದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಆದರೆ ಡಸ್ಸಾಲ್ಟ್ ಜತೆಗಿನ ಒಪ್ಪಂದದಲ್ಲಿ ಫ್ರಾನ್ಸ್‌ ಸರಕಾರದೊಂದಿಗೆ ಗ್ಯಾರಂಟಿ ಪಡೆಯದೆ “ಲೆಟರ್‌ ಆಫ್ ಕಂಫ‌ರ್ಟ್‌’ ಪಡೆದುದಕ್ಕೆ ಸಿಎಜಿ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತಕ್ಕೆ ಸೂಕ್ತವಾದ ಸಲಕರಣೆಗಳನ್ನು ರಫೇಲ್‌ ಯುದ್ಧ ವಿಮಾನಗಳಿಗೆ ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಎನ್‌ಡಿಎ ಒಪ್ಪಂದವು ಶೇ. 17.08ರಷ್ಟು ಅಗ್ಗವಾಗಿದೆ. ಇದೇ ವೇಳೆ ಶಸ್ತ್ರಾಸ್ತ್ರದ ಪ್ಯಾಕೇಜ್‌ ಶೇ. 1.05ರಷ್ಟು ಅಗ್ಗವಾಗಿದೆ ಎಂದೂ ಸಿಎಜಿ ಹೇಳಿದೆ. ಆದರೆ ಈ ಹಿಂದೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಮೋದಿ ಸರಕಾರದ ರಫೇಲ್‌ ಒಪ್ಪಂದವು ಶೇ. 9ರಷ್ಟು ಕಡಿಮೆಯಾಗಿದೆ ಎಂದಿದ್ದರು. ಇನ್ನೊಂದೆಡೆ ಎಂಜಿನಿಯರಿಂಗ್‌ ಸಪೋರ್ಟ್‌ ಪ್ಯಾಕೇಜ್‌ ಮತ್ತು ಕಾರ್ಯ ಕ್ಷಮತೆ ಆಧರಿತ ಲಾಜಿಸ್ಟಿಕ್ಸ್‌ ವಿಚಾರದಲ್ಲಿ ಶೇ. 6.54ರಷ್ಟು ಮತ್ತು ತರಬೇತಿ ವೆಚ್ಚದಲ್ಲಿ ಶೇ. 2.68ರಷ್ಟು ವೆಚ್ಚ ದಾಯಕವಾಗಿದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ. ಅಲ್ಲದೆ ನಿಗದಿಗಿಂತ ಒಂದು ತಿಂಗಳು ಮೊದಲೇ ರಫೇಲ್‌ ಯುದ್ಧ ವಿಮಾನಗಳನ್ನು ಈ ಒಪ್ಪಂದದಲ್ಲಿ ಪಡೆಯಲಾಗುತ್ತಿದೆ ಎಂದೂ ಉಲ್ಲೇಖೀಸಲಾಗಿದೆ. ಆದರೆ ಆಫ್ಸೆಟ್‌ ಪಾಲುದಾರರ ಬಗ್ಗೆ ಒಪ್ಪಂದದಲ್ಲಿ ಯಾವುದೇ ವಿವರ ನೀಡಲಿಲ್ಲ. 

ಆಫ್ಸೆಟ್‌ ಪಾಲುದಾರರನ್ನಾಗಿ ರಿಲಯೆನ್ಸ್‌ ಡಿಫೆನ್ಸ್‌ ಅನ್ನು ಆಯ್ಕೆ ಮಾಡಿದ್ದರ ಬಗ್ಗೆ ಕೇಂದ್ರ ಸರ ಕಾರದ ವಿರುದ್ಧ ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಆಫ್ ಸೆಟ್‌ ಪಾಲುದಾರರಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಷ್ಟೇ ಪೂರ್ಣ ಗೊಂಡಿದ್ದು, ಮುಂಬರುವ ಅಕ್ಟೋ ಬರ್‌ನಲ್ಲಿ ಈ ವರದಿಯನ್ನು ಡಸ್ಸಾಲ್ಟ್ ಕಂಪೆನಿ ಸರಕಾರಕ್ಕೆ ಸಲ್ಲಿಸಲಿದೆ. 

ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಗೂ ಮುನ್ನ ದಿ ಹಿಂದೂ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಸರಕಾರದ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ ನಡೆಸಿತು. ಅಲ್ಲದೆ ಸಂಸತ್‌ ಭವನದ ಎದುರು ಕಾಂಗ್ರೆಸ್‌ ಪ್ರತಿಭಟನೆಯನ್ನೂ ನಡೆಸಿತು. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾತನಾಡಿ, ವರದಿಯಲ್ಲಿ ಮಾತು ಕತೆ ನಡೆಸಿದವರು ಸಲ್ಲಿಸಿದ ಅಸಮ್ಮತಿಯ ಟಿಪ್ಪಣಿಯೇ ಪ್ರಸ್ತಾವವಾಗಿಲ್ಲ ಎಂದಿದ್ದಾರೆ. ಶೀಘ್ರವೇ ಕಡಿಮೆ ದರದಲ್ಲಿ ರಫೇಲ್‌ ಭಾರತಕ್ಕೆ ಬರುತ್ತದೆ ಎಂದ ಸರಕಾರದ ವಾದದಿಂದಲೇ ಡೀಲ್‌ ಕುಸಿದು ಬಿದ್ದಿದೆ ಎಂದು ದೂರಿದ್ದಾರೆ. ಜತೆಗೆ ಟ್ವೀಟ್‌ ಮಾಡಿದ್ದ ಅವರು ಚೌಕಿದಾರ್‌ ಚೋರ್‌ ಎಂದಿದ್ದಾರೆ.

ಬೆಲೆ ವಿವರ ಇಲ್ಲ
ದೇಶದ ಭದ್ರತೆಗಾಗಿ ರಫೇಲ್‌ ಒಪ್ಪಂದದ ಮೊತ್ತದ ವಿವರವನ್ನು ಸಂಸತ್ತಿಗೆ ಸಲ್ಲಿಸಲಾಗಿರುವ ವರದಿಯಲ್ಲಿ ಉಲ್ಲೇಖೀಸಲಿಲ್ಲ. ಯುಪಿಎ ಸರಕಾರ ತಲಾ ವಿಮಾನಕ್ಕೆ 520 ಕೋಟಿ ರೂ. ನಿಗದಿಸಿತ್ತು. ಆದರೆ ಎನ್‌ಡಿಎ ಸರಕಾರದ ಒಪ್ಪಂದದಲ್ಲಿ ಇದರ ವೆಚ್ಚ 1,600 ಕೋಟಿ ರೂ. ಆಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.