ವಂದೇ ಭಾರತ್ ಎಕ್ಸ್ಪ್ರೆಸ್ಗೆ ಮೋದಿ ಚಾಲನೆ
Team Udayavani, Feb 16, 2019, 12:30 AM IST
ಹೊಸದಿಲ್ಲಿ: ಭಾರತದ ಮೊದಲ ಸೆಮಿ ಹೈ ಸ್ಪೀಡ್ ರೈಲು “ವಂದೇ ಭಾರತ್ ಎಕ್ಸ್ಪ್ರೆಸ್’ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೊಸದಿಲ್ಲಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಿದರು. ಪುಲ್ವಾಮಾದಲ್ಲಿ ಸಿಆರ್ಪಿಎಫ್ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಬೇಸರದ ಮನಃಸ್ಥಿತಿಯಲ್ಲೇ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ರೈಲ್ವೇ ಸಚಿವ ಪಿಯೂಷ್ ಗೋಯಲ್ ಮತ್ತು ರೈಲ್ವೇ ಮಂಡಳಿ ಸದಸ್ಯರು ಹಾಜರಿದ್ದರು. ಶುಕ್ರವಾರ ಈ ರೈಲು ದಿಲ್ಲಿಯಿಂದ ವಾರಾಣಸಿಗೆ ಮೊದಲ ಪ್ರಯಾಣ ಆರಂಭಿಸಿತು.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಾವು ರೈಲ್ವೇ ಇಲಾಖೆಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಿದ್ದೇವೆ. ಈ ಹಿಂದೆ ರೈಲ್ವೇ ಆನ್ಲೈನ್ ರಿಸರ್ವೇಶನ್ ವ್ಯವಸ್ಥೆ ಹೇಗಿತ್ತು ಎಂದು ಎಲ್ಲರಿಗೂ ತಿಳಿದಿದೆ. ಒಂದು ನಿಮಿಷದಲ್ಲಿ ಕೇವಲ 2 ಸಾವಿರ ಟಿಕೆಟ್ ಬುಕ್ ಮಾಡಬಹುದಾಗಿತ್ತು. ಈಗ 20 ಸಾವಿರ ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ. ಒಂದು ರೈಲ್ವೇ ಯೋಜನೆಗೆ ಸಮ್ಮತಿ ಪಡೆಯಲು ಎರಡು ವರ್ಷಗಳು ಬೇಕಾಗುತ್ತಿತ್ತು. ಈಗ ಆರು ತಿಂಗಳುಗಳಲ್ಲಿಯೇ ಅನುಮತಿ ಸಿಗುತ್ತದೆ ಎಂದು ಅವರು ಹೇಳಿದರು.
ಫೆ.17ರಿಂದ “ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಪ್ರಯಾಣಿಕರಿಗೆ ಮುಕ್ತವಾಗಲಿದೆ. ಇದೇ ವೇಳೆ ರೈಲಿನ ಎಲ್ಲ ಟಿಕೆಟ್ಗಳೂ ಶುಕ್ರವಾರವೇ ಸೋಲ್ಡ್ ಔಟ್ ಆಗಿವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಪಿಯೂಷ್ ಗೋಯಲ್ ಅವರು, ಪುಲ್ವಾಮಾ ದಾಳಿಯ ಮಾರನೇ ದಿನವೇ “ವಂದೇ ಭಾರತ್ ಎಕ್ಸ್ಪ್ರೆಸ್’ಗೆ ಚಾಲನೆ ನೀಡುವ ಮೂಲಕ ನಾವು ಪಾಕಿಸ್ಥಾನದ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ. ದಾಳಿಯಿಂದ ನಮ್ಮನ್ನು ಹಿಮ್ಮೆಟ್ಟಿಸಲಾಗದು ಎಂಬುದನ್ನು ತೋರಿಸಿಕೊಟ್ಟಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ