ಇಂಡೋ-ಪಾಕ್ ಲಾಹೋರ್ ಬಸ್ಸಿಗೆ ಕಪ್ಪು ಜ್ಯಾಕೆಟ್, ಪ್ರತಿಭಟನೆ
Team Udayavani, Feb 16, 2019, 1:56 PM IST
ಫಗ್ವಾರಾ : 40 ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದಿರುವ ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ” ಸದಾ ಎ ಸರ್ಹದ್ ” ಎಂಬ ಹೆಸರಿನ ಭಾರತ – ಪಾಕ್ ಬಸ್ ಸೇವೆಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಬಲ ಪಂಥೀಯ ಸಂಘಟನೆಗಳ ಸದಸ್ಯರು ಇಂದು ಶನಿವಾರ ಲಾಹೋರ್ಗೆ ಹೋಗುತ್ತಿದ್ದ ಬಸ್ಸಿನತ್ತ ಕಪ್ಪು ಜ್ಯಾಕೆಟ್ ಮತ್ತು ಟಿ ಶರ್ಟ್ಗಳನ್ನು ಬೀಸಿ ಪ್ರತಿಭಟನೆ ನಡೆಸಿದರು.
ಶಿವಸೇನಾ (ಹಿಂದುಸ್ಥಾನ್) ರಾಜ್ಯ ಘಟಕದ ಅಧ್ಯಕ್ಷ ಮನೀಷ್ ಸೂದ್ ನೇತೃತ್ವದಲ್ಲಿ ಪ್ರತಿಭಟನಕಾರರು ದಿಲ್ಲಿ – ಲಾಹೋರ್ ಪಾಕಿಸ್ಥಾನ್ ಟೂರಿಸಂ ಡೆವಲಪ್ಮೆಂಟ್ ಕಾರ್ಪೊರೇಶನ್ (ಪಿಟಿಡಿಸಿ) ಬಸ್ಸು 1ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕ್ಕರೆ ಕಾರ್ಖಾನೆ ಚೌಕದ ಮೂಲಕ ಸಾಗುತ್ತಿದ್ದ ವೇಳೆ ಪ್ರತಿಭಟನೆ ನಡೆಸಿದರು.
ಲಾಹೋರ್ಗೆ ಹೋಗುತ್ತಿದ್ದ ಪಿಟಿಡಿಸಿ ಬಸ್ಸಿಗೆ ನಾವು ಕಪ್ಪು ಬಾವುಟ ತೋರಿಸಬೇಕೆಂದಿದ್ದೆವು; ಆದರೆ ಪೊಲೀಸರು ನಮ್ಮ ಕೈಯಿಂದ ಕಪ್ಪು ಬಾವುಟಗಳನ್ನು ಕಸಿದುಕೊಂಡರು ಎಂದು ಸೂದ್ ಹೇಳಿದರು.
ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಪಾಕಿಸ್ಥಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎಂದು ಸೂದ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ