ಮಸೂದ್ನನ್ನು ಅರೆಸ್ಟ್ ಮಾಡಿ,ಇಲ್ಲ ನಾವೇ ಮಾಡ್ತೇವೆ:ಪಾಕಿಗೆ ಅಮರೀಂದರ್
Team Udayavani, Feb 19, 2019, 11:41 AM IST
ಹೊಸದಿಲ್ಲಿ : “40 ಭಾರತೀಯ ಯೋಧರನ್ನು ಬಲಿಪಡೆದಿರುವ ಪುಲ್ವಾಮಾ ಉಗ್ರ ದಾಳಿ ತನ್ನದೇ ಕೃತ್ಯ ಎಂದು ಹೇಳಿಕೊಂಡಿರುವ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ಥಾನದ ಬಹಾವಲಪುರದಲ್ಲಿ ಇದ್ದಾನೆ; ಆತನನ್ನು ಕೂಡಲೇ ಅರೆಸ್ಟ್ ಮಾಡಿ; ಇಲ್ಲವೇ ಭಾರತವೇ ಆತನನ್ನು ಸೆರೆ ಹಿಡಿಯುತ್ತದೆ” ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಅಂತೆಯೇ ಪಾಕ್ ವಿರುದ್ಧ ಅತ್ಯಂತ ಕಠಿನ ಕ್ರಮವನ್ನು ಆಗ್ರಹಿಸಿದ್ದಾರೆ.
‘ಪುಲ್ವಾಮಾ ದಾಳಿಯಲ್ಲಿ ಪಾಕಿಸ್ಥಾನದ ಯಾವುದೇ ಕೈವಾಡವಿಲ್ಲ’ ಎಂದು 40 ಭಾರತೀಯ ಯೋಧರ ಸಾವಿಗೆ ಪಶ್ಚಾತ್ತಾಪ ಪಡದೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದ ತಾಸಿನೊಳಗೆ ಉಗ್ರ ಪ್ರತಿಕ್ರಿಯೆ ನೀಡಿರುವ ಸಿಎಂ ಅಮರೀಂದರ್ ಸಿಂಗ್, “ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು’ ಎನ್ನುವ ರೀತಿಯಲ್ಲಿ ಪಾಕ್ ಜತೆಗೆ ಅತ್ಯಂತ ನಿಷ್ಠುರವಾಗಿ ವ್ಯವಹರಿಸಬೇಕಾಗಿದೆ” ಎಂದು ಹೇಳಿದರು.
”ಪುಲ್ವಾಮಾ ಉಗ್ರ ದಾಳಿಗೆ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಹೊಣೆ ಹೊತ್ತಿದೆ; ಈ ಕೃತ್ಯವನ್ನು ಅದು ಐಎಸ್ಐ ನೆರವಿನಲ್ಲಿ ಎಸಗಿದೆ. ಪಾಕಿಸ್ಥಾನದ ಬಹಾವಲಪುರದಲ್ಲೇ ಇರುವ ಆತನನ್ನು ನೀವು (ಪಾಕಿಸ್ಥಾನ) ಕೂಡಲೇ ಅರೆಸ್ಟ್ ಮಾಡಿ; ಇಲ್ಲದಿದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ” ಎಂದು ಕ್ಯಾಪ್ಟನ್ ಅಮರೀಂದರ್ ಸಿಂಗ್ ಟ್ಟಿಟರ್ನಲ್ಲಿ ಬರೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ