ಖ್ಯಾತ ಹಿಂದಿ ಸಾಹಿತಿ ನಮವರ ಸಿಂಗ್ ನಿಧನ


Team Udayavani, Feb 20, 2019, 4:51 AM IST

namvar-singh-20-2.jpg

ನವದೆಹಲಿ: ಖ್ಯಾತ ಹಿಂದಿ ಸಾಹಿತಿ ಮತ್ತು ಸಾಹಿತ್ಯ ವಿಮರ್ಶಕ ನಮವರ ಸಿಂಗ್ ಅವರು ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ, ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾರಣಗಳಿಂದಾಗಿ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಮಂಗಳವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

‘ಕವಿತಾ ಕೆ ನಯೇ ಪ್ರತಿಮಾ’ ಎಂಬ ಸಾಹಿತ್ಯ ವಿಮರ್ಶಾ ಕೃತಿಗೆ ನಮವರ ಸಿಂಗ್ ಅವರಿಗೆ 1971ರಲ್ಲಿ ಸಾಹಿತ್ಯ ಅಕಾಡಮಿ ಪುರಸ್ಕಾರ ಸಂದಿತ್ತು. ನಮವರ ಸಿಂಗ್ ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನದಂದು ಲೋಧಿ ಅಂತ್ಯಸಂಸ್ಕಾರ ಪ್ರದೇಶದಲ್ಲಿ ನಡೆಯಲಿದೆ.

ಸಿಂಗ್ ಅವರು 1923ರಲ್ಲಿ ಉತ್ತರಪ್ರದೇಶದ ವಾರಣಾಸಿಯಲ್ಲಿ ಜನಿಸಿದ್ದರು. ಬನಾರಸ್ ಹಿಂದು ವಿಶ್ವವಿದ್ಯಾನಿಲಯದಿಂದ ಪಿ.ಹೆಚ್.ಡಿ. ಪದವಿಯನ್ನು ಪಡೆದ ಇವರು ಬಳಿಕ ಇದೇ ವಿಶ್ವವಿದ್ಯಾನಿಲಯದಲ್ಲಿ ಹಿಂದಿ ಉಪನ್ಯಾಸಕರಾಗಿ ನೇಮಕಗೊಳ್ಳುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಜೆ.ಎನ್.ಯು.ನಲ್ಲಿರುವ ಭಾರತೀಯ ಭಾಷಾ ಕೇಂದ್ರದ ಪ್ರಥಮ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಮವರ ಸಿಂಗ್ ಅವರು ಈ ಹುದ್ದೆಯಿಂದ 1992ರಲ್ಲಿ ನಿವೃತ್ತರಾದರು. ಹಿಂದಿ ಸಾಹಿತ್ಯಕ್ಕೆ ತಮ್ಮದೇ ಆದ ವಿಶೇಷ ಕೊಡುಗೆಯನ್ನು ನೀಡುವ ಮೂಲಕ ಹಿಂದಿ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ್ದರು. ‘ಕವಿತಾ ಕೆ ನಯೇ ಪ್ರತಿಮಾ’ ‘ಛಾಯಾವಧ್’ ಮತ್ತು ದೂಸ್ರೀ ಪರಂಪರಾ ಕಿ ಖೋಝ್’ ಸಿಂಗ್ ಅವರ ಮಹೋನ್ನತ ಕೃತಿಗಳಾಗಿವೆ.

ನಮವರ ಸಿಂಗ್ ಅವರು ‘ಜನಯುಗ್’ ಮತ್ತು ‘ಆಲೋಚನಾ’ ಪತ್ರಿಕೆಗಳ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಖಿಲ ಭಾರತ ಪ್ರಗತಿಪರ ಲೇಖಕರ ಸಂಘದ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು. ರಾಜಕೀಯದಲ್ಲೂ ತಮ್ಮ ಛಾಪನ್ನು ಒತ್ತಿದ್ದ ಸಿಂಗ್ ಅವರು 1959ರಲ್ಲಿ ಸಿ.ಪಿ.ಐ. ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.