ಆನೆಗಳ ಹಿಂಡಿನ ದಾಳಿಯಿಂದ ಪುಟ್ಟ ಬಾಲಕಿಯನ್ನು ರಕ್ಷಿಸಿದ ಆನೆ!


Team Udayavani, Feb 22, 2019, 10:08 AM IST

elephant.jpg

ಪಶ್ಚಿಮಬಂಗಾಳ(ಜಲ್ಪೈಗುರಿ): ಹಿಂಡು, ಹಿಂಡು ಆನೆಗಳು ಎದುರಾದಾಗ ಅವುಗಳು ದಾಳಿ ನಡೆಸುವುದೇ ಹೆಚ್ಚು. ದಟ್ಟ ಕಾಡಿನಲ್ಲಿ ಆನೆಗಳ ದಾಳಿಗೆ ಮನುಷ್ಯರು ಬಲಿಯಾದ ಘಟನೆ ಬಗ್ಗೆ ಓದಿದ್ದೀರಿ. ಆದರೆ ಪಶ್ಚಿಮಬಂಗಾಳದ ಜಲ್ಪೈಗುರಿಯಲ್ಲಿ ಆನೆಯೊಂದು ನಾಲ್ಕು ವರ್ಷದ ಪುಟ್ಟ ಮಗುವನ್ನು ರಕ್ಷಿಸಿದ ಅಪರೂಪದ ಪ್ರಸಂಗ ನಡೆದಿದೆ.

ಏನಿದು ಘಟನೆ:

ರಾಷ್ಟ್ರೀಯ ಹೆದ್ದಾರಿ 31ರ ಸಮೀಪದ ಗಾರುಮಾರಾ ಅರಣ್ಯದೊಳಗಿನ ದೇವಸ್ಥಾನದಲ್ಲಿ ಉದ್ಯಮಿ ನಿತು ಘೋಷ್, ಪತ್ನಿ ಟಿಟ್ಲಿ ಮತ್ತು ನಾಲ್ಕು ವರ್ಷದ ಮಗಳು ಅಹಾನಾ ಪೂಜೆ ಮುಗಿಸಿ ಬೈಕ್ ನಲ್ಲಿ ಲಾಟಾಗುರಿಗೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಆನೆಗಳ ಹಿಂಡು ರಸ್ತೆ ದಾಟುತ್ತಿರುವುದನ್ನು ಗಮನಿಸಿದ್ದರು.

ಸ್ವಲ್ಪ ಸಮಯದ ನಂತರ ಆನೆಗಳ ಹಿಂಡು ಮತ್ತೊಂದು ದಾರಿಯಲ್ಲಿ ಕಾಡಿನೊಳಗೆ ಹೊರಟಿರುವುದನ್ನು ಗಮನಿಸಿ ಘೋಷ್ ಅವರು ಬೈಕ್ ನಲ್ಲಿ ತಮ್ಮ ಪ್ರಯಾಣ ಮುಂದುವರಿಸಿದ್ದರು. ಏತನ್ಮಧ್ಯೆ ಏಕಾಏಕಿ ಮತ್ತಷ್ಟು ಆನೆಗಳು ಬರುತ್ತಿರುವುದನ್ನು ಗಮನಿಸಿದ ಘೋಷ್ ಬೈಕ್ ನ ಬ್ರೇಕ್ ಹಾಕಿದ್ದರು. ಈ ಸಂದರ್ಭದಲ್ಲಿ ಮೂವರು ಬೈಕ್ ನಿಂದ ಕೆಳಕ್ಕೆ ಬಿದ್ದಿದ್ದರು.

ಆತಂಕದಲ್ಲಿ ಬಿದ್ದಿದ್ದ ದಂಪತಿಗೆ ಅಚ್ಚರಿ ಎಂಬಂತೆ ದಿಢೀರ್ ಒಂದು ಆನೆ ನುಗ್ಗಿ ಬಂದು ನಾಲ್ಕು ವರ್ಷದ ಪುಟ್ಟ ಮಗುವನ್ನು ತನ್ನ ಕಾಲುಗಳ ಮಧ್ಯೆ ಇರಿಸಿಕೊಂಡು ನಿಂತುಬಿಟ್ಟಿತ್ತು!. ಉಳಿದ ಆನೆಗಳು ತಮ್ಮ ಪಾಡಿಗೆ ಕಾಡಿನೊಳಗೆ ಪ್ರಯಾಣ ಮುಂದುವರಿಸಿದ್ದವು.

ಕೆಲ ಹೊತ್ತಿನ ನಂತರ ತನ್ನ ಹಿಂಡಿನ ಆನೆಗಳು ಕಾಡಿನೊಳಗೆ ಹೋದ ಮೇಲೆ ಕಾಲಿನ ನಡುವೆ ಸುರಕ್ಷಿತವಾಗಿ ಇರಿಸಿಕೊಂಡಿದ್ದ ಮಗು ಅಹಾನಾಳನ್ನು ಬಿಟ್ಟು ಈ ಆನೆ ಕೂಡಾ ಕಾಡಿನ ಹಾದಿ ಹಿಡಿದಿತ್ತು. ಮಗು ಪೋಷಕರ ಮಡಿಲು ಸೇರಿತ್ತು. ಈ ವೇಳೆ ಸ್ಕೂಟರ್ ಅನ್ನು ನೋಡಿ ಯಾರೋ ಅಪಾಯದಲ್ಲಿದ್ದಾರೆಂದು ಊಹಿಸಿದ ಲಾರಿ ಚಾಲಕನೊಬ್ಬ ಜೋರಾಗಿ ಹಾರ್ನ್ ಮೊಳಗಿಸುವ ಮೂಲಕ ಸ್ಥಳಕ್ಕೆ ಬಂದಿದ್ದ.

ಕೂಡಲೇ ಮೂವರನ್ನು ಲಾಟಗುರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದ. ಮಗುವಿಗೆ ಯಾವುದೇ ದೊಡ್ಡ ಗಾಯವಾಗಿಲ್ಲ, ಆದರೆ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲವು ತಿಂಗಳುಗಳ ಹಿಂದೆ ಆನೆಗಳು ಪ್ರವಾಸಿಗರನ್ನು ಕೊಂದಿರುವ ಹಾಗೂ ಹಲವರ ಮೇಲೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ನಡೆದಿತ್ತು

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.