ಕಾಶ್ಮೀರ: ಜಮಾತೆ ಇಸ್ಲಾಮಿಗೆ ದಿಗ್ಬಂಧನ
Team Udayavani, Feb 24, 2019, 12:30 AM IST
ಶ್ರೀನಗರ: ಪುಲ್ವಾಮಾ ದಾಳಿ ಅನಂತರ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಕ್ರಮ ತೀವ್ರ ಗೊಂಡಿರುವ ಮಧ್ಯೆ ಶುಕ್ರವಾರ ರಾತೋರಾತ್ರಿ ದಿಢೀರ್ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು ಜಮಾತ್ -ಎ- ಇಸ್ಲಾಮಿಯ ಸುಮಾರು 150 ಸದಸ್ಯರನ್ನು ವಶಕ್ಕೆ ಪಡೆದಿವೆ.
ಸಂಸ್ಥೆಯ ಮುಖ್ಯಸ್ಥ ಅಬ್ದುಲ್ ಹಮೀದ್ ಫಯಾಜ್ರನ್ನೂ ವಶಕ್ಕೆ ಪಡೆಯಲಾಗಿದೆ.35ಎ ವಿಧಿಯ ಮಾನ್ಯತೆ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವದ್ದು. ಇದರ ಬೆನ್ನಿಗೆ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಸುಮಾರು 10 ಸಾವಿರ ಅರೆಸೇನಾ ಪಡೆ ಸಿಬಂದಿಯನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ.
ಪ್ರತ್ಯೇಕತಾವಾದಿ ನಾಯಕರನ್ನು ವಶಕ್ಕೆ ಪಡೆದಿರುವುದು ಸಾಮಾನ್ಯ ಪ್ರಕ್ರಿಯೆ ಎಂದು ಸೇನಾಪಡೆ ಹೇಳಿದೆ. ಆದರೆ ಇಷ್ಟು ನಾಯಕ ರನ್ನು ಒಂದೇಟಿಗೆ ವಶಕ್ಕೆ ಪಡೆದಿರು ವುದು ಅಪರೂಪ ಎನ್ನಲಾಗಿದೆ.
ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ರನ್ನೂ ವಶಕ್ಕೆ ಪಡೆದು ಕೋಥಿಬಾಘ ಪೊಲೀಸ್ ಠಾಣೆ ಯಲ್ಲಿ ಇರಿಸಲಾಗಿದೆ.
ಘಟನೆಯನ್ನು ಪಿಡಿಪಿ ಮುಖ್ಯಸ್ಥೆ ಮಹೆಬೂಬಾ ಮುಫ್ತಿ ಖಂಡಿಸಿದ್ದಾರೆ. ಯಾಸೀನ್ ಮಲಿಕ್ ವಶ ಅಕ್ರಮ, ಬಲವಂತದ ಕ್ರಮ ಎಂದು ಹುರಿಯತ್ ಕಾನ್ಫರೆನ್ಸ್ನ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು