ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಣ್ಗಾವಲು ಆದೇಶ
Team Udayavani, Mar 2, 2019, 12:30 AM IST
ತನಿಖಾ ಸಂಸ್ಥೆಗಳು ನಾಗರಿಕರ ಮೇಲೆ ಕಣ್ಗಾವಲಿಡಲು ಅನುವು ಮಾಡಿಕೊಡುವ ಆದೇಶವನ್ನು ಉಗ್ರ ಚಟುವಟಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಭದ್ರತಾ ಉದ್ದೇಶಕ್ಕಾಗಿ ಹೊರಡಿಸಲಾಗಿದೆ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರಕಾರ ಮಾಹಿತಿ ನೀಡಿದೆ. ಈ ಆದೇಶವು ಸಾರ್ವಜನಿಕರ ಗೌಪ್ಯತೆಗೆ ಯಾವುದೇ ಧಕ್ಕೆ ಉಂಟು ಮಾಡುವುದಿಲ್ಲ ಎಂದೂ ಸರಕಾರ ತಿಳಿಸಿದೆ. 2018 ಡಿಸೆಂಬರ್ 20 ರಂದು ಕೇಂದ್ರ ಸರಕಾರ ಹೊರಡಿಸಿದ ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಲಾದ ಹಲಲು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ತಳ್ಳಿಹಾಕುವಂತೆ ಕೇಂದ್ರ ಸರಕಾರ ವಿನಂತಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸ್ವೀಕರಿಸಿದ ಸುಪ್ರೀಂಕೋರ್ಟ್ ಜನವರಿ 14 ರಂದು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿತ್ತು.
ಭಯೋತ್ಪಾದನೆ, ಗಡಿಯಾಚೆಗಿನ ಅಪಾಯ, ಸೈಬರ್ ಅಪರಾಧ, ಸಾಮಾನ್ಯ ಅಪರಾಧ, ಮಾದಕ ದ್ರವ್ಯ ಸಾಗಣೆಯನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇಂಥವುಗಳಿಂದ ಉಂಟಾಗುವ ಅಪಾಯ ದೇಶದ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡಬಹುದಾಗಿರುತ್ತವೆ ಎಂದು ಕೇಂದ್ರ ಸರಕಾರ ಪ್ರಸ್ತಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ