ಕಾಶ್ಮೀರ ವಿಷಯ ಆಂತರಿಕ ಎಂದ ಭಾರತ
Team Udayavani, Mar 4, 2019, 12:30 AM IST
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಕಾಶ್ಮೀರ ವಿಚಾರ ಆಂತರಿಕವಾದುದು ಎಂದು ಭಾರತ ಸ್ಪಷ್ಟಪಡಿಸಿದೆ.
ಅಬುಧಾಬಿಯಲ್ಲಿ ನಡೆದ ಮುಸ್ಲಿಂ ರಾಷ್ಟ್ರಗಳ ಒಕ್ಕೂಟ (ಒಐಸಿ) ಸಮ್ಮೇಳನದಲ್ಲಿ ಕಾಶ್ಮೀರ ಕುರಿತಂತೆ ಮಂಡಿಸಲಾದ ನಿಲುವಳಿ ಬಗ್ಗೆ ವಿದೇಶಾಂಗ ಸಚಿವಾಲಯ ಈ ಪ್ರತಿಕ್ರಿಯೆ ನೀಡಿದೆ.
ಕಾಶ್ಮೀರ ವಿಚಾರದಲ್ಲಿ ಪಾಕಿಸ್ಥಾನವನ್ನು ಬೆಂಬಲಿಸಿ ಒಐಸಿಯಲ್ಲಿ ನಿಲುವಳಿ ಮಂಡಿಸಲಾಗಿದೆ ಎಂದು ಪಾಕಿಸ್ಥಾನದ ವಿದೇಶಾಂಗ ಸಚಿವಾಲಯ ಪ್ರಕಟಿಸಿತ್ತು. ಭಾರತ ಮತ್ತು ಪಾಕಿಸ್ಥಾನದ ಮಧ್ಯದ ವಿವಾದಕ್ಕೆ ಜಮ್ಮು ಕಾಶ್ಮೀರವು ಪ್ರಮುಖ ಸಮಸ್ಯೆಯಾಗಿದೆ. ದಕ್ಷಿಣ ಏಷ್ಯಾದ ಶಾಂತಿಗೆ ಈ ಸಮಸ್ಯೆಯನ್ನು ಬಗೆಹರಿಸುವುದು ಅತ್ಯಂತ ಅಗತ್ಯ ಎಂದು ಸಮ್ಮೇಳನದ ನಿಲುವಳಿಯಲ್ಲಿ ನಮೂದಿಸಲಾಗಿದೆ. 57 ದೇಶಗಳ ಒಐಸಿಯ ಮೊದಲ ದಿನ ಇದೇ ಮೊದಲ ಬಾರಿಗೆ ಭಾರತ ಭಾಗವಹಿಸಿತ್ತು. ಇದನ್ನು ವಿರೋಧಿಸಿ ಸಂಸ್ಥಾಪಕ ಸದಸ್ಯ ಪಾಕಿಸ್ಥಾನ ಸಭೆಯನ್ನು ಬಹಿಷ್ಕರಿಸಿತ್ತು. ಆದರೂ ಭಾರತಕ್ಕೆ ನೀಡಲಾದ ಆಹ್ವಾನವನ್ನು ಹಿಂಪಡೆಯದಿದ್ದುದು ಪಾಕಿಸ್ಥಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…