ಪ್ರಧಾನಿ ತವರಿನಿಂದ ‘ಲೋಕ ರಣಕಹಳೆ ‘ ಮೊಳಗಿಸಲಿರುವ ಕಾಂಗ್ರೆಸ್
Team Udayavani, Mar 12, 2019, 7:17 AM IST
ಅಹಮ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಂತ ನೆಲ ಗುಜರಾತ್ ನಿಂದಲೇ ಮುಂಬರುವ ಲೋಕಸಭಾ ಚುನಾವಣೆಯ ರಣಕಹಳೆಯನ್ನು ಮೊಳಗಿಸಲು ಯುವ ನಾಯಕತ್ವದ ಕಾಂಗ್ರೆಸ್ ಪಕ್ಷವು ಸರ್ವಸನ್ನದ್ಧವಾಗಿದೆ. ಮಂಗಳವಾರದಂದು ಗುಜರಾತಿನಲ್ಲಿ ಕಾಂಗ್ರೆಸ್ ಕಾರ್ಯನಿರ್ವಹಣಾ ಮಂಡಳಿಯ ಸಭೆ ನಡೆಯಲಿದೆ ಮತ್ತು ಸಾರ್ವಜನಿಕ ಸಭೆಗಳನ್ನು ಪಕ್ಷವು ಆಯೋಜಿಸಿದೆ. ‘ಜೈ ಜವಾನ್ ಜೈ ಕಿಸಾನ್’ ಎಂಬ ಘೋಷವಾಕ್ಯದಡಿಯಲ್ಲಿ ಪಕ್ಷವು ಇಂದು ಗಾಂಧಿನಗರ ಜಿಲ್ಲೆಯ ಅದಾಲಾಜ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನೂ ಆಯೋಜಿಸಿದೆ. ಇನ್ನು ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರು ಮಾತನಾಡುವ ನಿರೀಕ್ಷೆಯಿದೆ.
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೊಂಡ ಎರಡು ದಿನಗಳ ಬಳಿಕ ಸಿ.ಡಬ್ಲ್ಯು.ಸಿ. ಸಭೆಯು ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸೋನಿಯಾ ಗಾಂಧಿ, ಮಾಜೀ ಪ್ರಧಾನಿ ಮನಮೋಹನ್ ಸಿಂಗ್ ಮೊದಲಾದ ಉನ್ನತ ಸ್ತರದ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 58 ವರ್ಷಗಳ ಬಳಿಕ ಸಿ.ಡಬ್ಲ್ಯು.ಸಿ. ಸಭೆಯು ಗುಜರಾತ್ ನಲ್ಲಿ ನಡೆಯುತ್ತಿರುವುದು ವಿಶೇಷ. ಈ ಹಿಂದೆ 1961ರಲ್ಲಿ ಭಾವನಗರದಲ್ಲಿ ಸಿ.ಡಬ್ಲ್ಯು.ಸಿ. ಸಭೆಯು ನಡೆದಿತ್ತು.
Ahmedabad: Former PM Manmohan Singh, UPA chairperson Sonia Gandhi, and Congress General Secretary for UP East Priyanka Gandhi Vadra at “Sardar Patel Smarak”. #Gujarat pic.twitter.com/JbhoszkTLa
— ANI (@ANI) March 12, 2019
ಒಂದೇ ವೇದಿಕೆಯಲ್ಲಿ ಅಮ್ಮ, ಮಗ, ಮಗಳು
ಇನ್ನು ಗುಜರಾತ್ ನಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆಯು ಒಂದು ಕಾರಣಕ್ಕೆ ವಿಶೇಷತೆಯನ್ನು ಪಡೆದುಕೊಳ್ಳಲಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪಕ್ಷಾದ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಒಂದೇ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.
ಮೋದಿ ಕಟ್ಟಿ ಹಾಕಲು ಕಾರ್ಯತಂತ್ರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯಗಳನ್ನು ದೇಶದ ಮತದಾರರ ಮುಂದಿಡುವ ಮೂಲಕ ಮೋದಿ-ಶಾ ಜೋಡಿಯನ್ನು ಕಟ್ಟಿಹಾಕಲು ಕಾರ್ಯತಂತ್ರವನ್ನು ಹೆಣೆಯುವ ಕುರಿತಾಗಿ ಇಂದಿನ ಸಭೆಯಲ್ಲಿ ಉನ್ನತಮಟ್ಟದ ‘ಕೈ’ ನಾಯಕರು ಚರ್ಚೆಯನ್ನು ನಡೆಸಲಿದ್ದಾರೆ. ಮೋದಿ ಅವರು ಕಳೆದ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜನರಿಗೆ ನೀಡಿದ ಪೊಳ್ಳು ಭರವಸೆಗಳನ್ನೂ ಸಹ ಬಯಲು ಮಾಡುವ ಕಾರ್ಯತಂತ್ರವನ್ನು ಪಕ್ಷವು ಹೆಣೆಯಲಿದೆ ಎಂಬ ವಿಚಾರವನ್ನು ಗುಜರಾತ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಾಜೀವ್ ಸತಾವ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಟೇಲ್ ಮೀಸಲಾತಿ ಹೋರಾಟದ ರೂವಾರಿ ಹಾರ್ಧಿಕ್ ಪಟೇಲ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ