ವಾಹನ ಡೇಟಾ ಮಾರಾಟ
Team Udayavani, Mar 14, 2019, 12:40 AM IST
ಹೊಸದಿಲ್ಲಿ: ಕೇಂದ್ರ ಸರಕಾರವು ವಾಹನಗಳ ನೋಂದಣಿ ವಿವರಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಲು ಅನುಮತಿ ನೀಡಿರುವುದು, ಜನರ ಗೌಪ್ಯ ಮಾಹಿತಿಯ ಸೋರಿಕೆಯಾಗುವ ಆತಂಕ ಎದುರಾಗಿದೆ. ಸಾರಿಗೆ ಮತ್ತು ವಾಹನ ಉದ್ಯಮಕ್ಕೆ ಈ ಡೇಟಾ ತುಂಬಾ ಅನುಕೂಲ ಕಲ್ಪಿಸಲಿದೆ ಎಂಬ ಕಾರಣ ನೀಡಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್ 8ರಂದು ಸರಕಾರ ಅಂತಿಮಗೊಳಿಸಿರುವ ಸಗಟು ಡೇಟಾ ಹಂಚಿಕೆ ನೀತಿಯಲ್ಲಿ ಈ ಅಂಶಗಳಿವೆ.
ಸದ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನಗಳ ನೋಂದಣಿ ಮತ್ತು ಡ್ರೈವಿಂಗ್ ಲೈಸೆನ್ಸ್ಗಳ ದತ್ತಾಂಶ ವನ್ನು ಹೊಂದಿರುತ್ತದೆ.ಸದ್ಯ ಈ ಡೇಟಾ ವನ್ನು ಕಾನೂನು ಜಾರಿ ಸಂಸ್ಥೆಗಳಿಗೆ ನೀಡಲಾಗುತ್ತದೆ. ಅಂದರೆ ಪೊಲೀಸರು, ಸಿಬಿಐ ಹಾಗೂ ರಾಜ್ಯಗಳ ತನಿಖಾ ಸಂಸ್ಥೆಗಳು ಆರೋಪಿಗಳ ವಿವರಗಳು ಹಾಗೂ ಇತರ ಮಾಹಿತಿಯನ್ನು ಪಡೆಯಲು ಈ ದತ್ತಾಂಶವನ್ನು ಬಳಸಿ ಕೊಳ್ಳುತ್ತಿವೆ. ಈಗ ಈ ಡೇಟಾವನ್ನು ಉದ್ಯಮಗಳು, ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಇತ್ಯಾದಿಗಳಿಗೂ ನೀಡಲಾಗುತ್ತದೆ. ಇದಕ್ಕಾಗಿ ದರ ನಿಗದಿಸಲಾಗಿದೆ. ಈ ಬಗ್ಗೆ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಹೊಸ ನೀತಿಯ ಪ್ರಕಾರ, ಡೇಟಾವನ್ನು ಸರಕಾರದಿಂದ ಕೇಳುವ ಸಂಸ್ಥೆಗಳು ಭಾರತೀಯರ ಮಾಲಕತ್ವ ಹೊಂದಿರ ಬೇಕು ಮತ್ತು ಕನಿಷ್ಠ ಶೇ. 50ರಷ್ಟು ಪಾಲುದಾರಿಕೆಯನ್ನು ಹೊಂದಿರಬೇಕು. ನಿಯಂತ್ರಿತವಾಗಿ ದತ್ತಾಂಶ ವನ್ನು ಹಂಚಿ ಕೊಳ್ಳುವುದರಿಂದ ಸಾರಿಗೆ ಮತ್ತು ವಾಹನ ಉದ್ಯಮಕ್ಕೆ ಅನುಕೂಲವಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ಸೇವೆ ಯಲ್ಲಿ ಸುಧಾರಣೆ, ನಾಗರಿಕರಿಗೆ ಹಾಗೂ ಸರಕಾರಕ್ಕೆ ಹೆಚ್ಚಿನ ಲಾಭವನ್ನು ತಂದು ಕೊಡಲಿದೆ.
ಒಟ್ಟು 28 ವಿಧದ ಮಾಹಿತಿಯನ್ನು ಹಂಚಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಇದರಲ್ಲಿ ವ್ಯಕ್ತಿಯ ಹೆಸರು ಇರುವುದಿಲ್ಲ. ಆದರೆ ಈಗಾಗಲೇ ಸಾರಿಗೆ ಇಲಾಖೆಯ ವಾಹನ್ ಅಪ್ಲಿಕೇಶನ್ನಲ್ಲಿ ವ್ಯಕ್ತಿಯ ಹೆಸರೂ ಸಹಿತ ಎಲ್ಲ ಮಾಹಿತಿಯೂ ಇರುವುದರಿಂದ, ಲಭ್ಯ ಮಾಹಿ ತಿಯ ಮೂಲಕ ವ್ಯಕ್ತಿಯ ಹೆಸರನ್ನು ಕಂಡುಕೊಳ್ಳುವುದು ಸುಲಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು