ಮೀಸಲಾತಿ ನಿಧಿ ಪ್ರಸ್ತಾವನೆ ಆಯೋಗಕ್ಕೆ ರವಾನೆ
Team Udayavani, Mar 14, 2019, 12:45 AM IST
ಹೊಸದಿಲ್ಲಿ: ಮೀಸಲಾತಿ ರಹಿತ ಸಮುದಾಯದ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ. 10ರಷ್ಟು ಮೀಸಲಾತಿಯ ನಿಯಮವನ್ನು ಜಾರಿಗೊಳಿಸಲು ತನಗೆ ಅಗತ್ಯವಿರುವ 4,200 ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಅನುಮತಿ ನೀಡಬೇಕೆಂದು ಕೇಂದ್ರ ಸರಕಾರ, ಚುನಾವಣ ಆಯೋಗಕ್ಕೆ ಮನವಿ ಮಾಡಿದೆ.
ದೇಶದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಜಾರಿಗೆ ತರಲು 4,200 ಕೋಟಿ ರೂ.ಗಳ ಅವಶ್ಯಕತೆಯಿದೆ ಎಂಬ ಪ್ರಸ್ತಾವನೆಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ (ಎಚ್ಆರ್ಡಿ), ಕೇಂದ್ರ ಸಂಪುಟಕ್ಕೆ ಸಲ್ಲಿಸಿತ್ತು. ಮಾ. 10ರಂದು ಚುನಾವಣೆ ಘೋಷಣೆಯಾಗುವ ಮುನ್ನ ಕೆಲವಾರು ಬಾರಿ ಸಂಪುಟ ಸಭೆ ನಡೆದಿದ್ದರೂ, ಅಲ್ಲಿ ಬೇರೆ ಅತಿ ಮುಖ್ಯ ವಿಚಾರಗಳು ಪ್ರಸ್ತಾವವಾಗಿದ್ದರಿಂದ ಎಚ್ಆರ್ಡಿ ಪ್ರಸ್ತಾವನೆ ಚರ್ಚೆಗೆ ಬಂದಿರಲಿಲ್ಲ. ಈಗ ಚುನಾವಣ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸಂಪುಟದಲ್ಲಿ ಅನುಮೋದನೆಗೊಳ್ಳದೆ ಇದ್ದ ಎಚ್ಆರ್ಡಿ ಪ್ರಸ್ತಾವನೆಯನ್ನು ಸಂಪುಟ ಕಾರ್ಯದರ್ಶಿ ಚುನಾವಣ ಆಯೋಗಕ್ಕೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ